ಶ್ರೀರಾಮಾಯಣ ಸರಣಿಯ ತಾಳಮದ್ದಳೆಯ ಸಮಾರೋಪ.

ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ವತಿಯಿಂದ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ 2022 ರ ಜನವರಿಯಿಂದ ಆರಂಭವಾದ ಶ್ರೀರಾಮಾಯಣ ಸರಣಿಯ ತಾಳಮದ್ದಳೆಯು ಶ್ರೀರಾಮ ನಿರ್ಯಾಣ ತಾಳ ಮದ್ದಳೆಯೊಂದಿಗೆ ಮುಕ್ತಾಯಗೊಂಡಿತು.
ಭಾಗವತರಾಗಿ ಪದ್ಮನಾಭ ಕುಲಾಲ್, ಡಿ.ಕೆ ಆಚಾರ್ಯ ಅಲಂಕಾರು, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ ಹಿಮ್ಮೇಳದಲ್ಲಿ ಶ್ರೀಪತಿ ಉಪ್ಪಿನನಂಗಡಿ, ಮೋಹನ ಶರವೂರು, ಗುರುಮೂರ್ತಿ ಅಮ್ಮಣ್ಣಾಯ, ಕಾರ್ತಿಕ್ ಬಳ್ಳಮಂಜ ಅರ್ಥಧಾರಿಗಳಾಗಿ ಅಂಬಾ ಪ್ರಸಾದ್ ಪಾತಾಳ, ದಿವಾಕರ ಆಚಾರ್ಯ ಗೇರುಕಟ್ಟೆ, ಭಾಸ್ಕರ ಬಾರ್ಯ, ದಿವಾಕರ ಆಚಾರ್ಯ ನೇರೇಂಕಿ, ಜಿನೇಂದ್ರ ಜೈನ್, ಹರೀಶ್ ಆಚಾರ್ಯ ಉಪ್ಪಿನಂಗಡಿ,ಸಂಜೀವ ಪಾರೆಂಕಿ,ಗಂಗಾಧರ ಟೈಲರ್ ಭಾಗವಹಿಸಿದ್ದರು.
ಸರಣಿಯುದ್ದಕ್ಕೂ ಸಹಕರಿಸಿದ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಭಾಗವಹಿಸಿದ ಎಲ್ಲಾ ಕಲಾವಿದರಿಗೆ , ಯಕ್ಷಗಾನ ಸಂಘಗಳಿಗೆ ಅಧ್ಯಕ್ಷರಾದ ದಿವಾಕರ ಆಚಾರ್ಯ ಕೃತಜ್ಞತೆ ವ್ಯಕ್ತಪಡಿಸಿ,
ಸಂಘದ ಸುವರ್ಣ ಮಹೋತ್ಸವದ ಪ್ರಯುಕ್ತ ಜನವರಿ 2023 ರಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಲೆಯನ್ನು ಪ್ರಾಯೋಜಕರ ನೆಲೆಯಲ್ಲಿ ವಿಶಿಷ್ಟವಾಗಿ ನಡೆಸಲು ಚಿಂತನೆ ಮಾಡಲಾಗಿದೆ ಎಂದು ತಿಳಿಸಿದರು.


- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

