ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ದಿನಾಂಕ 13-11-2022ರಂದು ನೃತ್ಯನಿಕೇತನ ಕೊಡವೂರು ಉಡುಪಿ ಕಲಾವಿದರಿಂದ ‘ನೃತ್ಯ ಸಿಂಚನ’ ಕಾರ್ಯಕ್ರಮ ಜರಗಿತು.

ವಿದ್ವಾನ್ ಶ್ರೀ ಸುಧೀರ್ ರಾವ್ ಕೊಡವೂರು ಮತ್ತು ಕಾಂತಾರ ಕಮಲಕ್ಕ ಖ್ಯಾತಿಯ ವಿದುಷಿ ಶ್ರೀಮತಿ ಮಾನಸಿ ಸುಧೀರ್ ಅವರ ನಿರ್ದೇಶನದಲ್ಲಿ ನಡೆದ ಈ ನೃತ್ಯ ವೈಭವವನ್ನು ವಿಶ್ವವಿನೋದ ಬನಾರಿಯವರ 75ನೇ ಅಭಿನಂದನಾ ಸಮಾರಂಭದ ಪ್ರಯುಕ್ತ ಹಮ್ಮಿಕೊಳ್ಳಲಾಗಿತ್ತು.
ಬಹಳ ಅದ್ಭುತವಾಗಿ ಮೂಡಿಬಂದ ಈ ಕಾರ್ಯಕ್ರಮದಲ್ಲಿ ಕು.ಸಂಜನಾ ಶ್ರೀ, ವಿದುಷಿ ಸಾಧನಾ ಕಾಮತ್, ವಿದುಷಿ ಚೈತನ್ಯ ಆಚಾರ್ಯ, ವಿದುಷಿ ಅನಘ ಶ್ರೀ, ಕು. ಪ್ರಿಯಂವದಾ, ಕು.ಕೀರ್ತನಾ, ಕು. ಸೌಂದರ್ಯ, ಕು. ಪೃಥ್ವಿ, ಕು. ಬಿಂದಿಯ, ಕು. ವರ್ಷಿಣಿ, ಕು. ಮಹಿಮ, ಕು. ಅನಘ, ಕು. ಅರ್ಪಿತ, ಕು.ಶ್ರೇಯಾ, ಕು.ಪ್ರಜ್ಞಾ, ಕು.ಚೈತ್ರ ಶೆಣೈ, ಕು. ವರ್ಷಾ, ಕು.ಸುರಭಿ ಸುಧೀರ್ ಹಾಗೂ ಮಾನಸಿ ಸುಧೀರ್ ಅವರು ಭಾಗವಹಿಸಿದರು. ಶ್ರೀ ಸುಧೀರ್ ರಾವ್ ಕಾರ್ಯಕ್ರಮ ನಿರೂಪಿಸಿದರು.
ಭಾಗವಹಿಸಿದ ಕಲಾವಿದೆಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಉತ್ತಮವಾದ ಪ್ರಸಾಧನವನ್ನೊದಗಿಸಿದ ಪ್ರಕಾಶ್ ಕುಂಜೆತೊಟ್ಟು ಇವರಿಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಾಂತಾರ ಖ್ಯಾತಿಯ ಮಾನಸಿ ಸುಧೀರ್ ದಂಪತಿಗಳನ್ನು ಶಾಲು, ಸ್ಮರಣಿಕೆ ನೀಡಿ ಗೌರವಿಸಲಾಯಿತು.


- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

