ಮುಂಬಯಿ : ನ.16 ಯಕ್ಷಗಾನ ಕಲಾವಿದ , ಕಲಾಸೇವಕ ದಿನೇಶ್ ಶೆಟ್ಟಿ ವಿಕ್ರೋಲಿ ನಿಧರಾಗಿದ್ದಾರೆ.
ಅವರು ನಗರದ ಜನಪ್ರಿಯಾ ಯಕ್ಷಗಾನ ಗುರು , ಸಂಘಟಕ ಬಾಲಕೃಷ್ಣ ಶೆಟ್ಟಿ ಅಜೆಕಾರು ಇವರ ಮುಂದಾಳತ್ವದ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಹಾಗೂ ಶ್ರೀ ಗೀತಾಂಬಿಕಾ ಯಕ್ಷಗಾನ ಮಂಡಳಿ ಅಸಲ್ಪ ಘಾಟ್ಕೋಪರ್ ಈ ಕಲಾ ಸಂಸ್ಥೆಗಳ ಮುಖಾಂತರ ಜರಗುತ್ತಿದ್ದ ಎಲ್ಲಾ ಯಕ್ಷಗಾನ ಪ್ರದರ್ಶನಗಳಿಗೆ ಹಿನ್ನಲೆ ಸಹಕಾರವನ್ನು ನೀಡುತ್ತಿದ್ದ
ಮತ್ತು ಸಮಯ ಸಂದರ್ಭಕ್ಕನುಗಣವಾಗಿ ಸಣ್ಣ , ಪುಟ್ಟ ವೇಷವನ್ನು ಮಾಡಿ ಈ ಮೂಲಕ ಯಕ್ಷಗಾನ ಕಲಾಸೇವಾ ನಿರತರಾಗಿದ್ದರು. ದಿನೇಶ್ ಶೆಟ್ಟಿ ವಿಕ್ರೋಲಿ ಇವರು ಇಂದು ಅಂದರೆ ನ.16 ರ ಬುಧವಾರ ದೈವಾಧೀನರಾದರು.
ಅವರ ಆತ್ಮಕ್ಕೆ ಭಗವಂತನು, ಕಲಾಮಾತೆ ಸರಸ್ವತಿಯು ಚಿರಶಾಂತಿಯನ್ನು ಕರುಣಿಸಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ