ಮುಳಿಯಾರು ಸ್ಕಂದ ನಿನಾದ ಸಂಗೀತ ಶಾಲೆಯ ವಾರ್ಷಿಕೋತ್ಸವ ಮುಳಿಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಜರಗಿತು.

ಶ್ರೀ ಕ್ಷೇತ್ರದ ಪ್ರಬಂಧಕ ಸೀತಾರಾಮ ಬಳ್ಳುಳ್ಳಾಯ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಾ ” ಸಂಗೀತವು ನಮ್ಮ ಸಂಸ್ಕೃತಿಯಾಗಿದೆ. ಸಂಗೀತದ ನಿರಂತರ ಆಸ್ವಾದನೆಯು ಪ್ರತಿಯೊಂದು ಜೀವಿಯ ಆರೋಗ್ಯಕ್ಕೆ ಪೂರಕವಾಗಿದೆ. ಸಂಗೀತದ ಮೂಲಕ ದೇವರ ನಾಮಸ್ಮರಣೆ ನಿರಂತರ ನಡೆಯುತ್ತಿರಲಿ “ಎಂದು ಶುಭಕೋರಿದರು.
ನಂತರ ಪಾಠಶಾಲೆಯ ವಿದ್ಯಾರ್ಥಿಗಳಿಂದ ಸುಮಧುರವಾದ ಸಂಗೀತ ಉಪಾಸನೆ ಜರಗಿತು. ವಾರ್ಷಿಕೋತ್ಸವದ ಅಂಗವಾಗಿ ಸಂಗೀತ ಗುರುಗಳಾದ ವಿದುಷಿ ಉಷಾ ಈಶ್ವರ ಭಟ್ ಅವರು ಸಂಗೀತ ಕಚೇರಿ ನಡೆಸಿಕೊಟ್ಟರು.
ಪಿಟೀಲಿನಲ್ಲಿ ವಿದ್ವಾನ್ ಪ್ರಭಾಕರ ಕುಂಜಾರು, ಮೃದಂಗದಲ್ಲಿ ವಿದ್ವಾನ್ ಅನಿಲಕ್ಕಾಡ್ ಡಾ ಆರ್ ಜಯಕೃಷ್ಣನ್, ಘಟಂ ನಲ್ಲಿ ವಿದ್ವಾನ್ ಬಿ.ಜಿ. ಈಶ್ವರ ಭಟ್ ಜೊತೆಗೂಡಿದರು.
ಕಾರ್ಯಕ್ರಮದ ಕೊನೆಗೆ ಸಂಗೀತ ಕಲಾವಿದರನ್ನು ಶ್ರೀ ಕ್ಷೇತ್ರ ಪ್ರಧಾನ ಅರ್ಚಕ ಅನಂತಪದ್ಮನಾಭ ಮಯ್ಯ ಗೌರವಿಸಿದರು. ಗೋವಿಂದ ಬಳ್ಳಮೂಲೆ ಸ್ವಾಗತಿಸಿ, ರಾಘವನ್ ಬೆಳ್ಳಿಪ್ಪಾಡಿ ಧನ್ಯವಾದವಿತ್ತರು. ಶಾಸ್ತಾ ಕುಮಾರ ನಿರೂಪಣೆ ಮಾಡಿದರು.


- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

