ದಿನಾಂಕ 18-11-2022ನೇ ಶುಕ್ರವಾರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಇಲ್ಲಿ ಎಳೆಯ ಮಕ್ಕಳಲ್ಲಿ ಚೈತನ್ಯ ತುಂಬುವ ಸಲುವಾಗಿ ಪೂರ್ವ ಪ್ರಾಥಮಿಕ ವಿಭಾಗ – ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳಿಗೆ ಹಾಗೂ 1ನೇ ಯಿಂದ 4ನೇ ತರಗತಿಯ ಪುಟಾಣಿ ಮಕ್ಕಳಿಗೆ ಚಿಣ್ಣರ ಕ್ರೀಡೋತ್ಸವ-2022 ವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಶಾಂತಿ ಶೆಣೈ ಉದ್ಘಾಟಿಸಿ, ಪುಟಾಣಿ ಮಕ್ಕಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ.ಶಿವಪ್ರಕಾಶ್.ಎಂ ವಹಿಸಿ, ಕ್ರೀಡೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು, ಸದೃಢ ಶರೀರವನ್ನು ಪಡೆದು ಸತ್ಪ್ರಜೆಗಳಾಗಲು ಕ್ರೀಡೆ ಪೂರಕ ಎಂದು ಹೇಳಿ ಪುಟಾಣಿ ಮಕ್ಕಳಿಗೆ ಶುಭ ಕೋರಿದರು.
ನಂತರ ಪುಟಾಣಿ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಸಂಚಾಲಕ ಶ್ರೀ ರವಿನಾರಾಯಣ.ಎಂ, ರಕ್ಷಕ-ಶಿಕ್ಷಕ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಜಯಕುಮಾರ್ ಜೈನ್ ಹಾಗೂ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಭಾಸ್ಕರ ಗೌಡ ಉಪಸ್ಥಿತಸಿದ್ದರು.
ಶ್ರೀಮತಿ ಸಂಧ್ಯಾ ಸ್ವಾಗತಿಸಿ, ಪೂರ್ವಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಮತಾ ವಂದಿಸಿ, ಶ್ರೀಮತಿ ಸಹನಾ ಪೈ ಕಾರ್ಯಕ್ರಮ ನಿರೂಪಿದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ