ತೆಂಕುತಿಟ್ಟು ಯಕ್ಷಗಾನದ ಯುವ ಭಾಗವತರೋರ್ವರು ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತೆಂಕುತಿಟ್ಟಿನ ಭಾಗವತಿಕೆಯಲ್ಲಿ ತನ್ನದೇ ಛಾಪನ್ನು ಮೂಡಿಸಿ ಹೆಸರು ಮಾಡುತ್ತಿದ್ದ ಯುವ ಭಾಗವತರಾದ ಕೀರ್ತನ್ ಶೆಟ್ಟಿ ವಗೆನಾಡು ಅವರು ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ಕಲಾವಿದರು.
ಭಾಗವತರು ಇಂದು ಮುಡಿಪು ಸಮೀಪ ಮೂಳೂರು ಬಳಿ ತಮ್ಮ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ.ಇವರು ಬಪ್ಪನಾಡು ಹಾಗೂ ಇನ್ನಿತರ ಮೇಳಗಳಲ್ಲಿ ಭಾಗವತರಾಗಿ ಕಲಾಸೇವೆ ಮಾಡಿದ್ದರು.
ಇತ್ತೀಚಿಗೆ ಚಿಕ್ಕಮೇಳಗಳಲ್ಲಿಯೂ ಭಾಗವತರಾಗಿ ತಿರುಗಾಟ ನಡೆಸಿದ್ದರು. ಕೆಲವೊಂದು ವೈಯುಕ್ತಿಕ ಹಾಗೂ ಕೌಟುಂಬಿಕ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
“ಆತ್ಮಹತ್ಯೆ ಯಾವುದಕ್ಕೂ ಪರಿಹಾರ ಅಲ್ಲ, ನಿಮ್ಮ ಯಾವುದೇ ಸಮಸ್ಯೆಗಳಿಗೆ ಮಾನಸಿಕ ತಜ್ಞರ ಸಹಾಯ ಪಡೆಯಿರಿ”


- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

