ಹನುಮಗಿರಿ ಮೇಳದವರಿಂದ ನಿರಂತರ ಐದು ದಿನಗಳ ಯಕ್ಷಗಾನ ಕಾರ್ಯಕ್ರಮ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ – ಶಿವಪಂಚಾಕ್ಷರಿ ಮಹಿಮೆ, ಕುಮಾರ ವಿಜಯ, ವೇದೋದ್ಧರಣ- ಶ್ರೀನಿವಾಸ ಕಲ್ಯಾಣ, ನಮೋ ರಘುವಂಶದೀಪ ಮತ್ತು ಭಾರತ ಜನನಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ (ಹನುಮಗಿರಿ ಮೇಳ) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ ನಿರಂತರ ಐದು ದಿನಗಳ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಈ ಕಾರ್ಯಕ್ರಮ ಈ ತಿಂಗಳ ಐದರಿಂದ ಅಂದರೆ ದಿನಾಂಕ 05.12.2022 ಸೋಮವಾರದಿಂದ ಆರಂಭಗೊಂಡು ದಿನಾಂಕ 09.12.2022ರ ಶುಕ್ರವಾರದ ವರೆಗೆ ನಡೆಯಲಿದೆ. ಯಕ್ಷಗಾನ ಪ್ರದರ್ಶನ 6 ಘಂಟೆಗೆ ಆರಂಭವಾಗಲಿದೆ.
ಈ ಐದು ದಿನಗಳಲ್ಲಿ ಶಿವಪಂಚಾಕ್ಷರಿ ಮಹಿಮೆ, ಕುಮಾರ ವಿಜಯ, ವೇದೋದ್ಧರಣ- ಶ್ರೀನಿವಾಸ ಕಲ್ಯಾಣ, ನಮೋ ರಘುವಂಶದೀಪ ಮತ್ತು ಭಾರತ ಜನನಿ ಎಂಬ ಪ್ರಸಂಗಗಳನ್ನು ಆಡಿ ತೋರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಕರಪತ್ರವನ್ನು ನೋಡಿ.
- ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮದರಸಾದಲ್ಲಿ ಉರ್ದು ಕಲಿಸುತ್ತಿದ್ದ ಶಿಕ್ಷಕ
- 50 ವರ್ಷಗಳ ನಂತರ ಮತ್ತೆ ಅವಾಂತರ ಸೃಷ್ಟಿಸಿದ ‘ಕೋಸಿ’ ನದಿ – ಉತ್ತರ ಬಿಹಾರ ಪ್ರವಾಹದಲ್ಲಿ ಮುಳುಗಡೆಯಾಗುವ ಭೀತಿ, ಮನೆ ಬಿಟ್ಟು ಹೋಗುತ್ತಿರುವ ಜನ
- ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 15 ಲಕ್ಷ ರೂಪಾಯಿಗಳ ಕೊಡುಗೆ
- ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ – ಇಸ್ರೇಲ್ ಅಧಿಕೃತ ಹೇಳಿಕೆ
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ