ಇಂದಿನಿಂದ ಪುತ್ತೂರಿನಲ್ಲಿ ಯಕ್ಷೋತ್ಸವ ನಡೆಯಲಿದೆ. ಹನುಮಗಿರಿ ಮೇಳದವರಿಂದ ನಿರಂತರ ಐದು ದಿನಗಳ ಯಕ್ಷಗಾನ ಕಾರ್ಯಕ್ರಮ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ – ಶಿವಪಂಚಾಕ್ಷರಿ ಮಹಿಮೆ, ಕುಮಾರ ವಿಜಯ, ವೇದೋದ್ಧರಣ- ಶ್ರೀನಿವಾಸ ಕಲ್ಯಾಣ, ನಮೋ ರಘುವಂಶದೀಪ ಮತ್ತು ಭಾರತ ಜನನಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ (ಹನುಮಗಿರಿ ಮೇಳ) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ ನಿರಂತರ ಐದು ದಿನಗಳ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಈ ಕಾರ್ಯಕ್ರಮ ಈ ತಿಂಗಳ ಐದರಿಂದ ಅಂದರೆ ದಿನಾಂಕ 05.12.2022 ಸೋಮವಾರದಿಂದ ಆರಂಭಗೊಂಡು ದಿನಾಂಕ 09.12.2022ರ ಶುಕ್ರವಾರದ ವರೆಗೆ ನಡೆಯಲಿದೆ. ಯಕ್ಷಗಾನ ಪ್ರದರ್ಶನ 6 ಘಂಟೆಗೆ ಆರಂಭವಾಗಲಿದೆ.
ಈ ಐದು ದಿನಗಳಲ್ಲಿ ಶಿವಪಂಚಾಕ್ಷರಿ ಮಹಿಮೆ, ಕುಮಾರ ವಿಜಯ, ವೇದೋದ್ಧರಣ- ಶ್ರೀನಿವಾಸ ಕಲ್ಯಾಣ, ನಮೋ ರಘುವಂಶದೀಪ ಮತ್ತು ಭಾರತ ಜನನಿ ಎಂಬ ಪ್ರಸಂಗಗಳನ್ನು ಆಡಿ ತೋರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಕರಪತ್ರವನ್ನು ನೋಡಿ.
- ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ಎಂಟು ಜನರ ಮೇಲೆ ಮಾನನಷ್ಟ ದೂರು ದಾಖಲಿಸಿದ ರಿಮಾ ಕಲ್ಲಿಂಗಲ್
- ಕಾಳಿಂಗ ನಾವಡ ಪ್ರಶಸ್ತಿ 2024 – ಯಾರಿಗೆ ಒಲಿಯಿತು ಅದೃಷ್ಟ?
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ