ಮಹಿಳೆಯ ಸ್ತನ, ಕೈ, ಕಾಲು ಮತ್ತು ಕಿವಿಗಳನ್ನು ಹರಿತವಾದ ಆಯುಧದಿಂದ ಕತ್ತರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಹತ್ಯೆಗೆ ಬಳಸಿದ್ದ ಆಯುಧವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಶನಿವಾರ ನಡೆದ ಮಹಿಳೆಯ ಭೀಕರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಕಿಲ್ ಮಿಯಾನ್ (62) ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಎರಡನೇ ಆರೋಪಿಯನ್ನು ಈಗಾಗಲೇ ಭಾನುವಾರ ಬಂಧಿಸಲಾಗಿದೆ. ನೀಲಮ್ದೇವಿ ಎಂಬಾಕೆ ತನ್ನ ಮಗಳ ಮದುವೆಗೆಂದು ತನ್ನಿಂದ ಸಾಲವಾಗಿ ಪಡೆದಿದ್ದ ಹಣವನ್ನು ಹಿಂದಿರುಗಿಸಲಿಲ್ಲ ಎಂಬ ಕಾರಣಕ್ಕೆ ಆಕೆಯನ್ನು ಶಕೀಲ್ ಮಿಯಾನ್ ಚಾಕುವಿನಿಂದ ಇರಿದು ಕೊಂದಿದ್ದ.
ಬಿಹಾರದಲ್ಲಿ ಸಾರ್ವಜನಿಕ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬ ತನ್ನ ಸ್ತನ, ಕೈ, ಕಾಲು ಮತ್ತು ಕಿವಿಗಳನ್ನು ಹರಿತವಾದ ಆಯುಧದಿಂದ ಕತ್ತರಿಸಿದ ನಂತರ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಬಿಹಾರದ ಭಾಗಲ್ಪುರ ಜಿಲ್ಲೆಯ ಪಿರ್ಪೈಂಟಿ ಮಾರುಕಟ್ಟೆಯಲ್ಲಿ ಶನಿವಾರ ಈ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, 45-50 ವರ್ಷದ ಸಂತ್ರಸ್ತೆ ನೀಲಮ್ ದೇವಿ ಎಂಬಾಕೆಯನ್ನು ಶಕೀಲ್ ಮಿಯಾನ್ ಹಗಲು ಹೊತ್ತಿನಲ್ಲಿ ಭಾಗಲ್ಪುರದ ಪಿರ್ಪೈಂಟಿ ಪೊಲೀಸ್ ಠಾಣೆ ವ್ಯಾಪ್ತಿಯ ಛೋಟಿ ದಿಲೌರಿ ಗ್ರಾಮದಲ್ಲಿ ಹರಿತವಾದ ಆಯುಧದಿಂದ ಕೊಂದಿದ್ದಾನೆ. “ನೀಲಂ ದೇವಿಯನ್ನು ಆರೋಪಿಯು ಸುಮಾರು 10 ಬಾರಿ ಇರಿದಿದ್ದಾನೆ, ಇದರಲ್ಲಿ ಆಕೆಯ ಖಾಸಗಿ ಭಾಗಗಳು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಅನೇಕ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಭಾಗಲ್ಪುರದ ಆಸ್ಪತ್ರೆಗೆ ಕರೆತರುವ ಮುನ್ನವೇ ಆಕೆ ಸಾವನ್ನಪ್ಪಿದ್ದಾಳೆ. ಪ್ರಕರಣದ ಪ್ರಮುಖ ಆರೋಪಿ ಶಕಿಲ್ ಮಿಯಾನ್ನನ್ನು ಬಂಧಿಸಲಾಗಿದೆ. ಈ ಪ್ರಕರಣದ ಇಬ್ಬರು ಆರೋಪಿಗಳನ್ನು ನಾವು ವಿಚಾರಣೆ ನಡೆಸುತ್ತಿದ್ದೇವೆ. ಅಪರಾಧಕ್ಕೆ ಬಳಸಿದ್ದ ಕೊಡಲಿಯನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಭಾಗಲ್ಪುರ ವ್ಯಾಪ್ತಿಯ ಡಿಐಜಿ ವಿವೇಕಾನಂದ್ ತಿಳಿಸಿದ್ದಾರೆ.
ಆರೋಪಿ ಮತ್ತು ಸಂತ್ರಸ್ತೆಯ ನಡುವಿನ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ಆರೋಪಿಯಿಂದ ಸಾಲ ಪಡೆದಿದ್ದು, ಅದನ್ನು ಹಿಂದಿರುಗಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಶಕೀಲ್ ಮಿಯಾನ್ ಸಂತ್ರಸ್ತೆಯ ಮೇಲೆ ಹಣ ಹಿಂದಿರುಗಿಸುವಂತೆ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ.
- ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ಎಂಟು ಜನರ ಮೇಲೆ ಮಾನನಷ್ಟ ದೂರು ದಾಖಲಿಸಿದ ರಿಮಾ ಕಲ್ಲಿಂಗಲ್
- ಕಾಳಿಂಗ ನಾವಡ ಪ್ರಶಸ್ತಿ 2024 – ಯಾರಿಗೆ ಒಲಿಯಿತು ಅದೃಷ್ಟ?
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ