
ಖ್ಯಾತ ಯಕ್ಷಗಾನ ಭಾಗವತರಾದ ತಿಮ್ಮಪ್ಪ ಭಾಗವತ ಬಾಳೆಹದ್ದ ಅವರು ನಿನ್ನೆ ನಿಧನರಾಗಿದ್ದಾರೆ. ಅವರು ನಿನ್ನೆ ಸಂಜೆ ಆಕಸ್ಮಿಕವಾಗಿ ಮೃತ್ಯುವಶರಾಗಿದ್ದಾರೆ.
ನಿನ್ನೆ ದಿನಾಂಕ 13.12.2022ರ ಮಂಗಳವಾರ ಸಂಜೆ ಘಟಿಸಿದ ರಸ್ತೆ ಅಫಘಾತವೊಂದರಲ್ಲಿ ಅವರು ದುರದೃಷ್ಟಕರವಾಗಿ ಸಾವನ್ನಪ್ಪಿದ್ದಾರೆ. ಯಲ್ಲಾಪುರ ತಾಲೂಕಿನ ಬಾಳೆಹದ್ದ ಮೂಲದವರಾಗಿದ್ದ ಅವರು ಬಡಗುತಿಟ್ಟಿನ ಭಾಗವತರಾಗಿ ಜನಪ್ರಿಯರಾಗಿದ್ದರು.
ಯಲ್ಲಾಪುರ ಮತ್ತು ಶಿರಸಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಎರಡು ಕಾರುಗಳ ನಡುವೆ ಉಂಟಾದ ಅಫಘಾತದಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಅವರನ್ನು ಕೂಡಲೇ ಶಿರಸಿಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ನಿನ್ನೆ ಮಧ್ಯರಾತ್ರಿ ಮೃತಪಟ್ಟಿದ್ದಾರೆ.
ತಿಮ್ಮಪ್ಪ ಬಾಳೆಹದ್ದ ಅವರು ಹೊಸ್ತೋಟ ಮಂಜುನಾಥ ಭಾಗವತರ ಶಿಷ್ಯರಾಗಿದ್ದರು ಮತ್ತು ಬಡಗುತಿಟ್ಟಿನ ಭಾಗವತಿಕೆಯ ರಾಗ ಮತ್ತು ಮಟ್ಟುಗಳಲ್ಲಿ ವಿಶೇಷ ಪ್ರಾವೀಣ್ಯತೆಯನ್ನು ಪಡೆದಿದ್ದರು.
ಅವರ ನಿಧನಕ್ಕೆ ಯಕ್ಷಗಾನ ಕಲಾಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

