
ಕೆನರಾ ಬಸ್ ಮಾಲಕರ ಸಹಕಾರದಿಂದ ಯಕ್ಷಗಾನ ಕಲಾರಂಗ ಕಳೆದ ಹಲವು ವರ್ಷಗಳಿಂದ ವೃತ್ತಿ ಮೇಳದ ಕಲಾವಿದರಿಗೆ ಪ್ರತಿಶತ 50 ರಿಯಾಯಿತಿ ದರದಲ್ಲಿ ಪಾಸ್ ನೀಡುತ್ತಾ ಬಂದಿದ್ದು, ಈ ವರ್ಷದ ಆಗಸ್ಟ್ 31, 2023ರ ವರೆಗೆ ಅನ್ವಯವಾಗುವಂತೆ ಕೊಡಮಾಡಿದ ಬಸ್ ಪಾಸ್ ವಿತರಣಾ ಕಾರ್ಯಕ್ರಮ ಇಂದು (18-12-2021) ಸಂಸ್ಥೆಯ ಕಚೇರಿಯಲ್ಲಿ ಜರಗಿತು.
ಕೆನರಾ ಬಸ್ಸು ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್ ಮೇಳದ ಪ್ರತಿನಿಧಿಗಳಿಗೆ ವಿತರಿಸಿ ಮಾತನಾಡಿ, ಕಲಾವಿದರಿಗೆ ಅನುಕೂಲವಾಗುವಂತೆ ಮುಂದೆ ಅಕ್ಟೋಬರ್ 31ರವರೆಗೆ ವಿಸ್ತರಿಸುವುದಾಗಿ ಭರವಸೆ ನೀಡಿದರು.
ಸೌಕೂರು ಮೇಳದ ಆನಂದ ರಾವ್, ಗೋಳಿಗರಡಿ ಮೇಳದ ಕೃಷ್ಣ ಸಂತೆಕಟ್ಟೆ ಮತ್ತು ಶನೀಶ್ವರ ಮೇಳದ ಪ್ರವೀಣ ಬಲ್ಯಾಯ ಸ್ವೀಕರಿಸಿದರು. 25 ವಿವಿಧ ಮೇಳಗಳ 400ಕ್ಕೂ ಮಿಕ್ಕಿದ ಕಲಾವಿದರು ಪಾಸ್ ಸೌಲಭ್ಯ ಪಡೆಯಲಿದ್ದಾರೆ.
ಸಂಸ್ಥೆಯ ಅಧ್ಯಕ್ಷ ಎಮ್. ಗಂಗಾಧರ ರಾವ್ ಸ್ವಾಗತಿಸಿದರು. ಪದಾಧಿಕಾರಿಗಳಾದ ಪಿ. ಕಿಶನ್ ಹೆಗ್ಡೆ, ಪ್ರೊ. ನಾರಾಯಣ ಎಮ್. ಹೆಗಡೆ, ಹೆಚ್.ಎನ್. ಶೃಂಗೇಶ್ವರ, ಕಿಶೋರ್ ಸಿ. ಉದ್ಯಾವರ, ವಿಶ್ವನಾಥ ಉಪಸ್ಥಿತರಿದ್ದರು.
ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿ, ವೃತ್ತಿ ಕಲಾವಿದರಿಗೆ ಈ ಸೌಲಭ್ಯ ಕಲ್ಪಿಸಿದ ಕೆನರಾ ಬಸ್ ಮಾಲಕರ ಸಂಘದ ಪದಾಧಿಕಾರಿಗಳಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

