ಹತ್ತನೇ ತರಗತಿಯ ಬಾಲಕಿಯೊಬ್ಬಳು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಆಕೆಯನ್ನು ತಿರುವನಂತಪುರಂನ ವರ್ಕಳ ಸರಕಾರಿ ಮಾದರಿ ಹೈಯರ್ ಸೆಕೆಂಡರಿ ಶಾಲೆಯ ಆರ್ಯ ಕೃಷ್ಣ ಎಂದು ಗುರುತಿಸಲಾಗಿದೆ ವರ್ಕಳದ ಪುತ್ಥೆಂಚಂತಾ ಎಂಬಲ್ಲಿ ಈ ಘಟನೆ ನಡೆದಿದೆ ಆಕೆ ತನ್ನ ಮನೆಯ ಬೆಡ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಆರ್ಯ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು. ಕ್ರಿಸ್ಮಸ್ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದಿದ್ದಾಳೆ ಮತ್ತು ಶಾಲೆಯಿಂದ ಮನೆಗೆ ಹೋಗುವಾಗ ತುಂಬಾ ದುಃಖಿತಳಾಗಿದ್ದಳು ಎಂದು ವರದಿಗಳು ತಿಳಿಸಿವೆ.
ಆಕೆಯ ಹೆತ್ತವರು ಪಳಯಚಂತ ಜಂಕ್ಷನ್ನಲ್ಲಿ ತರಕಾರಿ ಅಂಗಡಿ ಹೊಂದಿದ್ದಾರೆ. ಶಾಲೆಯಿಂದ ತಂದೆಯ ಅಂಗಡಿಗೆ ತೆರಳಿದ್ದ ಬಾಲಕಿ ಸಂಜೆ 5.30ಕ್ಕೆ ಅಣ್ಣನೊಂದಿಗೆ ಮನೆಗೆ ಮರಳಿದ್ದಾಳೆ.
ಬಳಿಕ ಆಕೆಯ ಸಹೋದರ ಅಂಗಡಿಗೆ ತೆರಳಿದ್ದು, ಸಂಜೆ 6 ಗಂಟೆಗೆ ಮತ್ತೊಬ್ಬ ಸಹೋದರಿಯೊಂದಿಗೆ ಮನೆಗೆ ಬಂದಾಗ ಆರ್ಯ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ.
ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಾಗಲೇ ಆಕೆ ಸಾವನ್ನಪ್ಪಿದ್ದಳು.
- ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮದರಸಾದಲ್ಲಿ ಉರ್ದು ಕಲಿಸುತ್ತಿದ್ದ ಶಿಕ್ಷಕ
- 50 ವರ್ಷಗಳ ನಂತರ ಮತ್ತೆ ಅವಾಂತರ ಸೃಷ್ಟಿಸಿದ ‘ಕೋಸಿ’ ನದಿ – ಉತ್ತರ ಬಿಹಾರ ಪ್ರವಾಹದಲ್ಲಿ ಮುಳುಗಡೆಯಾಗುವ ಭೀತಿ, ಮನೆ ಬಿಟ್ಟು ಹೋಗುತ್ತಿರುವ ಜನ
- ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 15 ಲಕ್ಷ ರೂಪಾಯಿಗಳ ಕೊಡುಗೆ
- ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ – ಇಸ್ರೇಲ್ ಅಧಿಕೃತ ಹೇಳಿಕೆ
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ