Friday, September 20, 2024
Homeಯಕ್ಷಗಾನಧೀಮಂತ ಲೇಖಕ, ಶಿಕ್ಷಕ, ಹರಿದಾಸ, ತಾಳಮದ್ದಲೆ ಅರ್ಥಧಾರಿ, ವೇಷಧಾರಿ ಅಂಬಾತನಯ ಮುದ್ರಾಡಿ ನಿಧನ 

ಧೀಮಂತ ಲೇಖಕ, ಶಿಕ್ಷಕ, ಹರಿದಾಸ, ತಾಳಮದ್ದಲೆ ಅರ್ಥಧಾರಿ, ವೇಷಧಾರಿ ಅಂಬಾತನಯ ಮುದ್ರಾಡಿ ನಿಧನ 

ಸಾಹಿತಿ, ಕಲಾವಿದ, ಶಿಕ್ಷಕ ಸಾತ್ವಿಕ ಮನೋಭಾವದ ಸಹೃದಯಿ ಅಂಬಾತನಯ ಮುದ್ರಾಡಿ (88)  ಇಂದು ಮುಂಜಾನೆ ನಮ್ಮನ್ನಗಲಿದ್ದಾರೆ.

ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಶಿಕ್ಷಕ, ಹರಿದಾಸ,ಸಾಹಿತಿ ಮೊದಲಾದ  ವಿಭಾಗಗಳಲ್ಲಿ ಜನಪ್ರಿಯರಾದ ಅಂಬಾತನಯ ಮುದ್ರಾಡಿ (ಶ್ರೀ ಕೇಶವ ಶೆಟ್ಟಿಗಾರ್) ಬಹುಮುಖೀ ಸಾಧನೆ ಮತ್ತು ಸಾತ್ವಿಕ ಮನೋಭಾವಕ್ಕೆ ಹೆಸರಾಗಿದ್ದರು. 

ಅಂಬಾತನಯ ಮುದ್ರಾಡಿ ಎಂಬುದು ಲೇಖಕ ಶ್ರೀ ಕೇಶವ ಶೆಟ್ಟಿಗಾರರ ಕಾವ್ಯನಾಮ. ಊರ ಪರಿಸರದಲ್ಲಿ ಶ್ರೀಯುತರು ಕೇಶವ ಶೆಟ್ಟಿಗಾರರೆಂದೂ ಕೇಶವ ಮಾಸ್ಟರರೆಂದೂ ಗುರುತಿಸಲ್ಪಟ್ಟರೂ ಕನ್ನಡ ಸಾಹಿತ್ಯ ಲೋಕದಲ್ಲಿ ಅಂಬಾತನಯ ಮುದ್ರಾಡಿ ಎಂಬ ಕಾವ್ಯನಾಮದಿಂದಲೇ ಪ್ರಸಿದ್ಧರು.  

ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ ಮುಂತಾದ ಶ್ರೇಷ್ಠ ಗೌರವಗಳು ಅವರಿಗೆ ಅರ್ಹವಾಗಿ ಸಂದಿವೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಮಾಡಿದ್ದಾರೆ.

ಕಾಂತಾವರ ಕನ್ನಡ ಸಂಘದ ‘ನಾಡಿಗೆ ನಮಸ್ಕಾರ’ ಸಾಹಿತ್ಯ ಸಂಸ್ಕೃತಿ ಚಿಂತನ ಗ್ರಂಥಮಾಲೆಯಾಗಿ “ಸ್ವಪ್ರಯತ್ನದ ಧೀಮಂತ ಲೇಖಕ – ಅಂಬಾತನಯ ಮುದ್ರಾಡಿ” ಎಂಬ ಪುಸ್ತಕವು 2017ರಲ್ಲಿ ಪ್ರಕಟವಾಗಿತ್ತು.

ಅಂಬಾತನಯ  ಮುದ್ರಾಡಿಯವರು ಪತ್ನಿ, ಮೂವರು ಪುತ್ರರು, ಐವರು ಪುತ್ರಿಯರನ್ನು ಹಾಗೂ ಅಪಾರ ಶಿಷ್ಯ ವೃಂದವನ್ನು ಅಗಲಿದ್ದಾರೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments