ಉಡುಪಿ : ಯತಿಶ್ರೇಷ್ಠರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಹೆಸರಿನಲ್ಲಿ ಅವರ ಕರಕಮಲ ಸಂಜಾತ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಅನುಗ್ರಹ ಪೂರ್ವಕವಾಗಿ ಕೊಡಮಾಡುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ತೆಂಕುತಿಟ್ಟಿನ ಕಲಾವಿದ ದಂಪತಿಗಳಾದ ಶ್ರೀ ಹರಿನಾರಾಯಣ ಬೈಪಾಡಿತ್ತಾಯ-ಶ್ರೀಮತಿ ಲೀಲಾವತಿ ಬೈಪಾಡಿತ್ತಾಯ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು ಏಪ್ರಿಲ್ 6, 2023 ಗುರುವಾರ ಪಲಿಮಾರಿನಲ್ಲಿರುವ ಮೂಲ ಮಠದಲ್ಲಿ ಜರಗಲಿದೆ.
ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆಮಾಡುವಲ್ಲಿ ಯಕ್ಷಗಾನ ಕಲಾರಂಗವು ಸಹಕರಿಸಿದೆ.
ಪ್ರಶಸ್ತಿಯು ರೂ. 50,000/- ನಗದು ಪುರಸ್ಕಾರ ಸಹಿತ ಪ್ರಶಸ್ತಿ ಪರಿಕರಗಳನ್ನೊಳಗೊಂಡಿರುತ್ತದೆ ಎಂಬುದಾಗಿ ಪಲಿಮಾರು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

