Monday, September 30, 2024
Homeಸುದ್ದಿವಾಸುದೇವ ನಾಡಿಗ್ ಮತ್ತು ರತ್ನಾಕರ ಕುನಗೋಡು ಅವರಿಗೆ ಸು. ರಂ. ಎಕ್ಕುಂಡಿ ಜನ್ಮ ಶತಮಾನೋತ್ಸವ ಕಾವ್ಯ...

ವಾಸುದೇವ ನಾಡಿಗ್ ಮತ್ತು ರತ್ನಾಕರ ಕುನಗೋಡು ಅವರಿಗೆ ಸು. ರಂ. ಎಕ್ಕುಂಡಿ ಜನ್ಮ ಶತಮಾನೋತ್ಸವ ಕಾವ್ಯ ಪ್ರಶಸ್ತಿ: ಏಪ್ರಿಲ್ 16ರಂದು ಧಾರವಾಡದಲ್ಲಿ ಪ್ರಶಸ್ತಿ ಪ್ರದಾನ

ಕನ್ನಡ ಶ್ರೇಷ್ಠ ಕವಿಗಳಲ್ಲೊಬ್ಬರಾದ ದಿ. ಸುಬ್ಬಣ್ಣ ರಂಗನಾಥ ಎಕ್ಕುಂಡಿ ಅವರ ಜನ್ಮಶತಮಾನೋತ್ಸವ ಪ್ರಯುಕ್ತ ಧಾರವಾಡದ ಸಾಹಿತ್ಯ ಗಂಗಾ ಮತ್ತು ಹಂಸಭಾವಿಯ ವಾರಂಬಳ್ಳಿ ಪ್ರತಿಷ್ಠಾನದ ಸಹಯೋಗದಲ್ಲಿ ನೀಡಲಾಗುತ್ತಿರುವ ‘ಸು. ರಂ. ಎಕ್ಕುಂಡಿ ಜನ್ಮ ಶತಮಾನೋತ್ಸವ ಕಾವ್ಯ ಪ್ರಶಸ್ತಿ – 2023’ಕ್ಕೆ ಶ್ರೀ ವಾಸುದೇವ ನಾಡಿಗರ ‘ಬಂದರಿಗೆ ಬಂದ ಹಡಗು’ ಮತ್ತು ಡಾ. ರತ್ನಾಕರ ಕುನಗೋಡು ಅವರ ‘ಎದೆನೆಲದ ಕಾವು’ ಕವನ ಸಂಕಲನಗಳು ಆಯ್ಕೆಯಾಗಿವೆ.

ತೀರ್ಪುಗಾರರಾದ ಡಾ. ಸಂಕೇತ ಪಾಟೀಲ, ಡಾ. ಸುಭಾಷ್ ಪಟ್ಟಾಜೆ ಮತ್ತು ಡಾ. ರವಿಶಂಕರ ಜಿ. ಕೆ. ಈ ಎರಡು ಕೃತಿಗಳನ್ನು ಆಯ್ಕೆ ಮಾಡಿದ್ದಾರೆ.

ಇದೇ ಏಪ್ರಿಲ್ 16ರಂದು ಧಾರವಾಡದ ರಂಗಾಯಣದಲ್ಲಿ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಕನ್ನಡದ ಪ್ರಸಿದ್ಧ ಸಾಹಿತಿ ಪ್ರೊ. ರಾಘವೇಂದ್ರ ಪಾಟೀಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಈ ಪ್ರಶಸ್ತಿ 5000 ರೂಪಾಯಿಗಳ ನಗದು, ಸನ್ಮಾನ ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ ಎಂದು ಸಾಹಿತ್ಯ ಗಂಗಾ ಪ್ರತಿಷ್ಠಾನದ ಮುಖ್ಯಸ್ಥರಾದ ವಿಕಾಸ ಹೊಸಮನಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments