ಕಾಸರಗೋಡು. ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಠಾನ ದ ಸಾಂಸ್ಕೃತಿಕ ಭವನಕ್ಕೆಇತ್ತೀಚೆಗೆ ಭೇಟಿಯಿತ್ತ ಕೊಂಡೆವೂರು ಶ್ರೀಗಳು ಹರಸಿ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಆಗಮಿಸಿದ್ದ ಕೊಡುಗೈದಾನಿ ಸದಾಶಿವ ಶಟ್ಟಿ ಮುಂಬೈ ಇವರು ಮಾತನಾಡಿ ಅಲ್ಪ ಆದಾಯ ಇರುವ ಕಲಾವಿದರು ಕಲೆಯ ಮೇಲಿನ ಪ್ರೀತಿಯಿಂದ ಇಂತಹ ಸಾಧನೆಗೆ ಮುಂದಾದುದು ಅಪೂರ್ವ ಎಂದು ಸಂತೋಷ ವ್ಯಕ್ತಪಡಿಸಿದರು.
ಯಕ್ಷಗಾನ ಮ್ಯೂಸಿಯಂ ಮತ್ತು ಗ್ರಂಥಾಲಯ ನಿರ್ಮಾಣ ಕಾರ್ಯವನ್ನು ವೀಕ್ಷಸಿ ಶ್ಲಾಘಿಸಿದರು. ಈ ಕಾರ್ಯಕ್ರಮಕ್ಕೆ ರಾಜಾರಾಮರಾವ್ ಮೀಯಪದವು ಸ್ವಾಗತಿಸಿ ಸಿರಿಬಾಗಿಲು ರಾಮಕೃಷ್ಣ ಮಯ್ಯರು ಗೌರವಿಸಿ ವಂದಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆ ಯ ಕೋಶಾಧಿಕಾರಿ ಶ್ರೀ ಲಕ್ಮೀನಾರಯಣ ಪಟ್ಟೇರಿ, ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ, ಜಗದೀಶ್ ಕೂಡ್ಲು, ಶ್ರೀಮತಿ ಸುಮಿತ್ರಾ ಆರ್ ಮಯ್ಯ, ಶ್ರೀಮತಿ ಅಮಿತಾ ಶೆಟ್ಟಿ, ಜಯರಾಮ ರೈ, ರವೀಂದ್ರ ರೈ, ಶೀನ ಶೆಟ್ಟಿ ಕಜೆ, ಯೋಗಾಚಾರ್ಯ ಪುಂಡರೀಕಾಕ್ಷ ಆಚಾರ್ಯ, ವಿಷ್ಣು ಶ್ಯಾನುಭೋಗ್, ಮುಂತಾದವರು, ಊರಿನ ಗಣ್ಯರು, ಪ್ರತಿಷ್ಠಾನದ ಸದಸ್ಯರು ಉಪಸ್ಥಿತರಿದ್ದರು.
- ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮದರಸಾದಲ್ಲಿ ಉರ್ದು ಕಲಿಸುತ್ತಿದ್ದ ಶಿಕ್ಷಕ
- 50 ವರ್ಷಗಳ ನಂತರ ಮತ್ತೆ ಅವಾಂತರ ಸೃಷ್ಟಿಸಿದ ‘ಕೋಸಿ’ ನದಿ – ಉತ್ತರ ಬಿಹಾರ ಪ್ರವಾಹದಲ್ಲಿ ಮುಳುಗಡೆಯಾಗುವ ಭೀತಿ, ಮನೆ ಬಿಟ್ಟು ಹೋಗುತ್ತಿರುವ ಜನ
- ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 15 ಲಕ್ಷ ರೂಪಾಯಿಗಳ ಕೊಡುಗೆ
- ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ – ಇಸ್ರೇಲ್ ಅಧಿಕೃತ ಹೇಳಿಕೆ
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ