ದಿನಾಂಕ 08-04-2023ನೇ ಶನಿವಾರದಂದು ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ತಿಂಗಳ ತಾಳಮದ್ದಳೆ ‘ಸೀತಾಪಹಾರ – ವಾಲಿಮೋಕ್ಷ’ ರಾಮಣ್ಣ ಮಾಸ್ತರ್ ದೇಲಂಪಾಡಿ ಮತ್ತು ಮನೆಯವರಿಂದ ಸೇವಾರೂಪವಾಗಿ ಪ್ರಸ್ತುತಗೊಂಡಿತು.
ಶ್ರೀ ಗೋಪಾಲಕೃಷ್ಣ ದೇವರ ಪೂಜಾರ್ಚನೆಯೊಂದಿಗೆ ಆರಂಭಗೊಂಡ ಈ ಕಲಾಕಾರ್ಯಕ್ರಮವು ಸಂಘದ ಕಾರ್ಯದರ್ಶಿ ಹಿರಿಯ ಭಾಗವತ ಗುರು ವಿಶ್ವವಿನೋದ ಬನಾರಿಯವರ ನಿರ್ದೇಶನದಲ್ಲಿ ಮುಂದುವರೆಯಿತು.
ಭಾಗವತರಾಗಿ ಮೋಹನ ಮೆಣಸಿನಕಾನ ಮತ್ತು ಕುಮಾರಿ ರಚನ ಚಿದ್ಗಲ್ ತಮ್ಮ ಅಪೂರ್ವ ಕಂಠಸಿರಿಯಿಂದ ಹಾಡಿ ಜನಮೆಚ್ಚುಗೆ ಗಳಿಸಿದರು. ಚೆಂಡೆ ಮದ್ದಳೆ ವಾದನದಲ್ಲಿ ಅಪ್ಪಯ್ಯ ಮಣಿಯಾಣಿ ಮಂಡೆಕ್ಕೋಲು, ವಿಷ್ಣುಶರಣ ಬನಾರಿ, ಶ್ರೀಹರಿ ಆಲಂಕಾರು, ಕೃಷ್ಣಪ್ರಸಾದ್ ಬೆಳ್ಳಿಪ್ಪಾಡಿ ಭಾಗವಹಿಸಿದ್ದರು.
ಪಾತ್ರಧಾರಿಗಳಾಗಿ ಡಾ| ರಮಾನಂದ ಬನಾರಿ ಮಂಜೇಶ್ವರ, ವೆಂಕಟರಾಮ ಭಟ್ಟ ಸುಳ್ಯ, ಬೆಳ್ಳಿಪ್ಪಾಡಿ ಸದಾಶಿವ ರೈ, ಯಂ.ರಮಾನಂದ ರೈ ದೇಲಂಪಾಡಿ, ರಾಮನಾಯ್ಕ ದೇಲಂಪಾಡಿ, ನಾರಾಯಣ ದೇಲಂಪಾಡಿ, ಪದ್ಮನಾಭ ಗೋಳಿತ್ತಡ್ಕ ಮತ್ತು ಡಿ. ರಾಮಣ್ಣ ಮಾಸ್ತರ್ ತಮ್ಮ ವಾಕ್ಚಾತುರ್ಯದಿಂದ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದರು.
ಕಾರ್ಯಕ್ರಮದ ಮೊದಲಿಗೆ ಲತಾ ಆಚಾರ್ಯ ಬನಾರಿ ಪಾತ್ರ ಪರಿಚಯ ಮಾಡಿಕೊಟ್ಟರು. ನಂದಕಿಶೋರ್ ಬನಾರಿ ಸ್ವಾಗತಿಸಿ ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ ಧನ್ಯವಾದ ಸಮರ್ಪಿಸಿದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ