ಬೆಂಗಳೂರು: ರಾಯಚೂರು ಮೂಲದ ಅಂಬಿಕಾ (35) ಕೆಆರ್ ಪುರಂನ ಟಿಸಿ ಪಾಳ್ಯದಲ್ಲಿರುವ ಮನೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಮೃತರು ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದು ಮನೆಯಲ್ಲಿ ಒಂಟಿಯಾಗಿ ವಾಸವಿದ್ದು, ಇಬ್ಬರು ಮಕ್ಕಳು ಹಾಸ್ಟೆಲ್ನಲ್ಲಿದ್ದರು.
“ಹತ್ಯೆ ಮಾಡಿದ ನಂತರ ದುಷ್ಕರ್ಮಿಗಳು ಹೊರಗಿನಿಂದ ಬಾಗಿಲು ಹಾಕಿದ್ದರು. 2-3 ದಿನಗಳ ಹಿಂದೆ ಕೊಲೆ ನಡೆದಿದ್ದು, ಅನೇಕ ಇರಿತದ ಗಾಯಗಳು ಪತ್ತೆಯಾಗಿವೆ.
ಮೇಲ್ನೋಟಕ್ಕೆ ಸಂತ್ರಸ್ತೆಗೆ ತಿಳಿದಿರುವ ಯಾರೋ ಕೊಲೆಯ ಹಿಂದೆ ಇದ್ದಾರೆ. ಆರೋಪಿಯನ್ನು ಬಂಧಿಸಿದ ನಂತರವಷ್ಟೇ ಕೊಲೆಗೆ ಕಾರಣ ಗೊತ್ತಾಗಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಆಕೆಯ ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಕಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿ ಒಳ ನುಗ್ಗಿ ಕೊಳೆತ ಸ್ಥಿತಿಯಲ್ಲಿದ್ದುದನ್ನು ಪತ್ತೆ ಹಚ್ಚಿದ್ದಾರೆ
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ