ಹಾದಿಗಲ್ಲು ಶ್ರೀ ಅಭಯಲಕ್ಷ್ಮಿ ನರಸಿಂಹ ದೇವಾಲಯದ ವರ್ಧಂತ್ಯುತ್ಸವದ ಪ್ರಯುಕ್ತ 11-04-2023ರಂದು ಜರಗಿದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕಲಾ ಕಾರ್ಯಕ್ರಮದಲ್ಲಿ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾಮಂಡಳಿ ಅಂಬಲಪಾಡಿ (ಅಧ್ಯಕ್ಷ ಕೆ. ಅಜಿತ್ಕುಮಾರ್)
ಹಾಗೂ ಹಿರಿಯ ಯಕ್ಷಗಾನ ಕಲಾವಿದ ಶಿವಶಂಕರ ಕೆ.ಎಸ್. ಭಟ್ ಇವರಿಗೆ ತಲಾ ರೂ.10,000/- ಹಮ್ಮಿಣಿಯೊಂದಿಗೆ ‘ಶ್ರೀವಾದಿರಾಜಾನುಗ್ರಹ’ ಪ್ರಶಸ್ತಿಯನ್ನು ದೇವಳದ ಧರ್ಮದರ್ಶಿ ಹಾದಿಗಲ್ಲು ಲಕ್ಷ್ಮೀನಾರಾಯಣರು ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಪದಾಧಿಕಾರಿಗಳಾದ ಎಸ್. ವಿ.ಭಟ್, ಮುರಲಿ ಕಡೆಕಾರ್ ನಾರಾಯಣ ಎಂ. ಹೆಗಡೆ ಹಾಗೂ ಭಾಗವತರಾದ ಕೆ.ಜೆ. ಗಣೇಶ್ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ನರಸಿಂಹ ತುಂಗರ ನಿರ್ದೇಶನದಲ್ಲಿ ಅಂಬಲಪಾಡಿ ಲಕ್ಷ್ಮೀಜನಾರ್ದನ ಯಕ್ಷಗಾನ ಮಂಡಳಿಯ ಬಾಲಕಲಾವಿದರಿಂದ ‘ಮಾಯಾಪುರಿ ಮಹಾತ್ಮೆ’ ಯಕ್ಷಗಾನ ಪ್ರಸ್ತುತಗೊಂಡಿತು.
- ಬೆಂಗಳೂರಿನಲ್ಲಿ ಪಿಜಿಯ 5ನೇ ಮಹಡಿಯಿಂದ ಹಾರಿ ಇಂಜಿನಿಯರ್ ಯುವತಿ ಆತ್ಮಹತ್ಯೆ
- 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಬಂಧನ
- 60 ವರ್ಷದವರನ್ನು 25 ವರ್ಷದವರನ್ನಾಗಿ ಮಾಡುತ್ತೇನೆಂದು 35 ಕೋಟಿ ರೂಪಾಯಿ ವಂಚನೆ – ವಂಚಿಸಿದ ದಂಪತಿಗಾಗಿ ತೀವ್ರ ಹುಡುಕಾಟ
- ವಿಡಿಯೋ: ವಿಧಾನಸಭೆಯ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರದ ಉಪ ಸ್ಪೀಕರ್ ನರಹರಿ ಜೀರ್ವಾಲ್ ಸುರಕ್ಷತಾ ಬಲೆಯೊಳಗೆ(ನೆಟ್) ಸಿಲುಕಿಕೊಂಡರು!
- ಶಿಕ್ಷಕ, ಪತ್ನಿ ಮತ್ತು ಇಬ್ಬರು ಮಕ್ಕಳು ಬರ್ಬರವಾಗಿ ಹತ್ಯೆ – ಬೆದರಿಕೆಯ ಬಗ್ಗೆ ತಿಂಗಳ ಹಿಂದೆಯೇ ದೂರು ನೀಡಿದ್ದರೂ ನಿರ್ಲಕ್ಷ್ಯ?