Sunday, October 6, 2024
Homeಸುದ್ದಿಶ್ರೀಕರ ಭಟ್‌ ಮತ್ತು ಡಾ.ಪಾದೆಕಲ್ಲು ವಿಷ್ಣು ಭಟ್‌ ಅವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ

ಶ್ರೀಕರ ಭಟ್‌ ಮತ್ತು ಡಾ.ಪಾದೆಕಲ್ಲು ವಿಷ್ಣು ಭಟ್‌ ಅವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ

ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮವಾಗಿ ಅರ್ಥಧಾರಿ, ಪತ್ರಕರ್ತ, ಲೇಖಕ, ವಿಮರ್ಶಕ, ಸಂಘಟಕ ಶ್ರೀಕರ ಭಟ್ ಹಾಗೂ ಅರ್ಥಧಾರಿ, ಸಂಶೋಧಕ, ಲೇಖಕ, ಪ್ರವಚನಕಾರ ಡಾ.ಪಾದೆಕಲ್ಲು ವಿಷ್ಣು ಭಟ್‌ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ತಾಳಮದ್ದಲೆ ಸಪ್ತಾಹ ಮೇ 21ರಿಂದ 27ರ ವರೆಗೆ ನಡೆಯಲಿದ್ದು, ಮೇ 27 ಶನಿವಾರ ಸಂಜೆ 5.00 ಗಂಟೆಗೆ ಶಿರ್ವದ ಮಹಿಳಾ ಸೌಧದಲ್ಲಿ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಈ ವಿಷಯವನ್ನು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿಯು ರೂ. 20,000/- ನಗದು ಪುರಸ್ಕಾರ ಒಳಗೊಂಡಿರುತ್ತದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments