ಅಂಬಲಪಾಡಿ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾಮಂಡಳಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ 5 ದಿನಗಳ ವೇಷಗಾರಿಕೆ ಕಮ್ಮಟ ಇಂದು 13.05.2023 ಶ್ರೀ ಜನಾರ್ದನ ಮಂಟಪದಲ್ಲಿ ಸಮಾಪನಗೊಂಡಿತು.
ನರಸಿಂಹ ತುಂಗ ಮತ್ತು ಮಿಥುನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ 20 ವಿದ್ಯಾರ್ಥಿಗಳು ವಿವಿಧ ವೇಷಗಳ ಮುಖವರ್ಣಿಕೆ ಮಾಡುವುದು ಮತ್ತು ಕಿರೀಟ ಕಟ್ಟಿಕೊಳ್ಳುವ ಕೌಶಲವನ್ನು ಈ ಶಿಬಿರದಲ್ಲಿ ತಿಳಿದುಕೊಂಡರು.
ಸಮಾರೋಪ ಸಮಾರಂಭದಲ್ಲಿ ಶ್ರೀ ವಿಜಯಕುಮಾರ್ ಮುದ್ರಾಡಿ, ಶ್ರೀಮತಿ ವಿದ್ಯಾ ಪ್ರಸಾದ್ ಹಾಗೂ ಶ್ರೀ ಗೋವಿಂದ ಭಂಡಾರಿ ಪಾಲ್ಗೊಂಡರು. ಶ್ರೀ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಶ್ರದ್ಧೆಯಿಂದ ಪಾಲ್ಗೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಮಂಡಳಿಯ ಅಧ್ಯಕ್ಷ ಕೆ. ಅಜಿತ್ಕುಮಾರ್ ಮಾತನಾಡಿ ಮುಂದೆ ಪ್ರತಿ ಭಾನುವಾರ ಯಕ್ಷಗಾನ ನೃತ್ಯ ಅಭಿನಯ ಮತ್ತು ವೇಷಗಾರಿಕೆ ತರಗತಿಗಳು ಜರುಗಲಿವೆ ಎಂದು ತಿಳಿಸಿದರು.
ಶಿಬಿರಾರ್ಥಿಗಳ ಪರವಾಗಿ ಶೈಲೇಶ್, ಮಾನ್ಯ, ಅದಿತಿ ಹಾಗೂ ಶ್ರಾವ್ಯ ಇವರು ಶಿಬಿರದ ತಮ್ಮ ಅಮೂಲ್ಯ ಅನುಭವವನ್ನು ಹಂಚಿಕೊಂಡರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು.
- 150 ವರ್ಷಗಳ ವರೆಗೆ ಬದುಕಲು ದಂಪತಿಗಳ ಹೊಸ ತಂತ್ರ – ನವೀನ ಆವಿಷ್ಕಾರ, ಚಿಕಿತ್ಸೆಗಳಿಂದ ಇದು ಸಾಧ್ಯ ಎಂದು ತೋರಿಸಲು ಹೊರಟ ಗಂಡ-ಹೆಂಡತಿ!
- 10ನೇ ತರಗತಿ ವಿದ್ಯಾರ್ಥಿಯು ತನ್ನ ಶಿಕ್ಷಕಿಯ ಅಶ್ಲೀಲ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣ – 4 ಮಂದಿಯ ಬಂಧನ
- ಎದೆಯ ಒಂದು ಬದಿಯಲ್ಲಿ ಪ್ಲಾಸ್ಟರ್ ನೊಂದಿಗೆ ಆಸ್ಪತ್ರೆಯಿಂದ ಮನೆಗೆ ಮರಳಿದ ಗಾಯಕಿ ಅಮೃತಾ ಸುರೇಶ್
- ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು