ಕಾಸರಗೋಡು : ಹೈದರಾಬಾದ್ ಮೂಲದ ಇಂಡಿಯಾ ಪಿ ಎಸ್ ಸಿ ಆಫ್ ಸೈಟ್ ಕಾನ್ಫರೆನ್ಸ್ – 2023 ಬೇಕಲದ ತಾಜ್ ರೆಸಾರ್ಟ್ ನಲ್ಲಿ ಇತ್ತೀಚೆಗೆ (ಮೇ 23) ಜರಗಿತು.
ಈ ಸಂದರ್ಭದಲ್ಲಿ ಮಂಗಳೂರಿನ ತೋನ್ಸೆ ಯಕ್ಷ ಬಳಗದಿಂದ ಇಂಗ್ಲಿಷ್ ಭಾಷೆಯಲ್ಲಿ ‘ದಿ ವಿಕ್ಟರಿ ಆಫ್ ಸುದರ್ಶನ’ (ಸುದರ್ಶನ ವಿಜಯ) ತೆಂಕುತಿಟ್ಟು ಯಕ್ಷಗಾನವನ್ನು ಪ್ರದರ್ಶಿಸಲಾಯಿತು. ಶ್ಯಾಡ್ಸ್ ಈವೆಂಟ್ಸ್ ಅವರ ಸಂಯೋಜನೆಯಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಭಾಗವತರಾಗಿ ತೋನ್ಸೆ ಪುಷ್ಕಳ ಕುಮಾರ್, ಹಿಮ್ಮೇಳದಲ್ಲಿ ಶರತ್ ಕುಮಾರ್ ಕದ್ರಿ, ಸುದಾಸ್ ಕಾವೂರು ಮತ್ತು ಹರಿಶ್ಚಂದ್ರ ನಾಯಗ ಮಾಡೂರು ಪಾಲ್ಗೊಂಡರು. ಮುಮ್ಮೇಳದಲ್ಲಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ (ದೇವೇಂದ್ರ), ಡಾ.ದಿನಕರ ಎಸ್.ಪಚ್ಚನಾಡಿ (ಸುದರ್ಶನ ) ಮತ್ತು ಶರತ್ ಪಣಂಬೂರು (ಶತ್ರು ಪ್ರಸೂದನ) ಪಾತ್ರ ವಹಿಸಿದರು.
ತಂಡದ ಬಗ್ಗೆ ಪರಿಚಯ ನೀಡಿದ ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿ ಕರಾವಳಿಯ ಸಾಂಪ್ರದಾಯಿಕ ಯಕ್ಷಗಾನ ಕಲೆಯ ಮಹತ್ವವನ್ನು ತಿಳಿಸಿ ಆಯ್ದುಕೊಂಡ ಪ್ರಸಂಗದ ಕಥಾಸಾರವನ್ನು ಆಂಗ್ಲ ಭಾಷೆಯಲ್ಲಿ ವಿವರಿಸಿದರು.
ಪಿ ಎಸ್ ಸಿ ಮುಖ್ಯಸ್ಥರು ಮತ್ತು ಕಂಪೆನಿಯ ಹಲವಾರು ಪ್ರತಿನಿಧಿಗಳು ಯಕ್ಷಗಾನವನ್ನು ವೀಕ್ಷಿಸಿ ಕಲಾವಿದರನ್ನು ಅಭಿನಂದಿಸಿದರು.
- 150 ವರ್ಷಗಳ ವರೆಗೆ ಬದುಕಲು ದಂಪತಿಗಳ ಹೊಸ ತಂತ್ರ – ನವೀನ ಆವಿಷ್ಕಾರ, ಚಿಕಿತ್ಸೆಗಳಿಂದ ಇದು ಸಾಧ್ಯ ಎಂದು ತೋರಿಸಲು ಹೊರಟ ಗಂಡ-ಹೆಂಡತಿ!
- 10ನೇ ತರಗತಿ ವಿದ್ಯಾರ್ಥಿಯು ತನ್ನ ಶಿಕ್ಷಕಿಯ ಅಶ್ಲೀಲ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣ – 4 ಮಂದಿಯ ಬಂಧನ
- ಎದೆಯ ಒಂದು ಬದಿಯಲ್ಲಿ ಪ್ಲಾಸ್ಟರ್ ನೊಂದಿಗೆ ಆಸ್ಪತ್ರೆಯಿಂದ ಮನೆಗೆ ಮರಳಿದ ಗಾಯಕಿ ಅಮೃತಾ ಸುರೇಶ್
- ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು