ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಹದಿಹರೆಯದ ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ಒಂದು ದಿನದ ಕಾರ್ಯಾಗಾರ ಶಾಲಾ ಸಭಾಂಗಣದಲ್ಲಿ ದಿನಾಂಕ 21-07-2023ರಂದು ನಡೆಯಿತು.
ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಈ ಕಾರ್ಯಾಗಾರ ನಡೆಯಿತು. ಡಾ.ಸಂದೀಪ್.ಎಚ್.ಎಸ್ ಮಕ್ಕಳ
ತಜ್ಞರು ಮತ್ತು ಡಾ.ಅನನ್ಯ ಲಕ್ಷ್ಮೀ ಸಂದೀಪ್ ತಜ್ಞರು ಕಮ್ಯುನಿಟಿ ಮೆಡಿಸಿನ್, ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಹದಿಹರೆಯದ ಸಮಸ್ಯೆಗಳು ಹಾಗೂ ಪರಿಹಾರಗಳ ಬಗ್ಗೆ ವಿವಿಧ ಚಟುವಟಿಕೆಗಳೊಂದಿಗೆ ಕ್ರಿಯಾಶೀಲರಾಗಿ ನೆರೆವೇರಿಸಿಕೊಟ್ಟರು.
ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿ ಸದಸ್ಯೆಯಾದ ಶ್ರೀಮತಿ ಮಾಲಾ ಮಹೇಶ್ ಉಪಸ್ಥಿತರಿದ್ದರು. ಶ್ರೀಮತಿ ಆಶಾ.ಕೆ ಮತ್ತು ಶ್ರೀಮತಿ ಭಾರತಿ.ಎಸ್.ಎ ಪ್ರಾಸ್ತಾವಿಕ ನುಡಿಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು.
ಶ್ರೀಮತಿ ಕವಿತಾ, ಶ್ರೀಮತಿ ಶಾಂತಿ, ಶ್ರೀಮತಿ ದೀಪ್ತಿ ಹಾಗೂ ಶ್ರೀಮತಿ ಲತಾ ಕುಮಾರಿ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಲಕ್ಷ್ಮೀ ಹಾಗೂ ಶ್ರೀಮತಿ ರೇಖಾ ಆಚಾರ್ಯ ವಂದಿಸಿದರು.
- ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 15 ಲಕ್ಷ ರೂಪಾಯಿಗಳ ಕೊಡುಗೆ
- ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ – ಇಸ್ರೇಲ್ ಅಧಿಕೃತ ಹೇಳಿಕೆ
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ
- 60ರ ಹರೆಯದ ಸಂಭ್ರಮದಲ್ಲಿರುವ ಸುಣ್ಣಂಬಳ ವಿಶ್ವೇಶ್ವರ ಭಟ್ಟರಿಗೆ ಇಂದು ಕಟೀಲು ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ ಸನ್ಮಾನ
- 30 ವರ್ಷಗಳ ಹಿಂದೆ ನಾಪತ್ತೆಯಾಗಿದ್ದವನ ಅಸ್ಥಿಪಂಜರ ಅಂಗಳದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ, ಉತ್ಖನನದ ನಂತರ ಬೆಚ್ಚಿ ಬಿದ್ದ ಪೊಲೀಸರು