ಬಡಗು ನಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ಮೂರೂರು ವಿಷ್ಣುಭಟ್ (65) ಇಂದು ಉತ್ತರ ಕನ್ನಡದ ಸಿದ್ಧಾಪುರದಲ್ಲಿ ನಿಧನ ಹೊಂದಿದರು.
ಗುಂಡುಬಾಳ, ಅಮೃತೇಶ್ವರೀ, ಹಿರೇಮಹಾಲಿಂಗೆಶ್ವರ, ಶಿರಸಿ, ಪೆರ್ಡೂರು, ಮಂದಾರ್ತಿ, ಸಾಲಿಗ್ರಾಮ, ಪೂರ್ಣಚಂದ್ರ ಮೇಳಗಳಲ್ಲಿ ನಾಲ್ಕು ದಶಕಗಳ ಕಲಾ ಸೇವೆ ಗೈದಿದ್ದರು. ದಾಕ್ಷಯಿಣಿ, ಸೀತೆ, ಅಂಬೆ, ಚಂದ್ರಮತಿ, ದಮಯಂತಿ ಮೊದಲಾದ ಪೌರಾಣಿಕ ಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿದ್ದರು.
ತಮ್ಮ ಭಾವಪೂರ್ಣ ಅಭಿನಯ, ಮಾತುಗಾರಿಕೆಯಿಂದ ಅಪಾರ ಸಂಖ್ಯೆಯ ಅಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿದ್ದರು. ಯಕ್ಷಗಾನ ಕಲಾರಂಗ ಪ್ರಶಸ್ತಿ, ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕರಗಳಿಗೆ ಭಾಜನರಾಗಿದ್ದರು.
ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ.ಅವರ ನಿಧಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

