ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿ ಇದೇ ಬರುವ 16 ನೇ ತಾರೀಕು ಸೋಮವಾರ ನವರಾತ್ರಿ ಶುಭ ಸಂದರ್ಭದಲ್ಲಿ ಸಂಜೆ 4 ಗಂಟೆಗೆ ತೆಂಕುತಿಟ್ಟು ಯಕ್ಷ ಮಾರ್ಗ- 2 ಉದ್ಘಾಟನೆ ಹಾಗೂ ತೆಂಕುತಿಟ್ಟು ಹಿಮ್ಮೇಳ ತರಗತಿ ಆರಂಭವಾಗಲಿದೆ.
ತೆಂಕುತಿಟ್ಟು ಯಕ್ಷಗಾನದ ಶಾಸ್ತ್ರೀಯ ನಾಟ್ಯ ಗುರುಗಳಾದ ಕರ್ಗಲ್ಲು ವಿಶ್ವೇಶ್ವರ ಭಟ್ ಇವರಿಂದ ತೆಂಕುತಿಟ್ಟು ಯಕ್ಷಮಾರ್ಗ ಒಂದು ಕಾರ್ಯಕ್ರಮ ಕಳೆದ ತಿಂಗಳು ನಡೆದಿರುತ್ತದೆ. ತೆಂಕುತಿಟ್ಟು ಶಾಸ್ತ್ರಿಯ ನಾಟ್ಯದ ಪ್ರಾತ್ಯಕ್ಷಿಕೆ ಹಾಗೂ ದಾಖಲೀಕರಣ -ಸಂವಾದಗಳು ನಡೆಯಲಿದೆ. ದಾಖಲೀಕರಣಗಳು ಸಂಪೂರ್ಣ ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಯನ ಕೇಂದ್ರದಲ್ಲಿ ಶಾಶ್ವತವಾಗಿರುತ್ತದೆ.
ಮುಂದಿನ ದಿನಗಳಲ್ಲಿ ನಾಟ್ಯ ಅಭ್ಯಾಸದ ಕುರಿತು ಅಧ್ಯಯನ ನಡೆಸುವಲ್ಲಿ ಈ ದಾಖಲಿಕರಣಗಳು ಉಪಯುಕ್ತವಾಗಲಿದೆ. ಅದೇ ದಿನ ಮಾಂಬಾಡಿ ಗುರುಗಳ ಸಲಹೆಯಂತೆ ಕುದುರೆ ಕೂಡ್ಲು ರಾಮಮೂರ್ತಿ ಇವರಿಂದ ತೆಂಕುತಿಟ್ಟು ಯಕ್ಷಗಾನದ ಹಿಮ್ಮೇಳ ತರಗತಿಯು ಆರಂಭವಾಗಲಿದೆ.
ಈ ಕಾರ್ಯಕ್ರಮವನ್ನು ನಾಡಿನ ಗೌರವಾನ್ವಿತ ಉದ್ಯಮಿಗಳಾದ, ಕಲಾಪೋಷಕರು,ಧಾರ್ಮಿಕ ಮುಖಂಡರಾದ ಶ್ರೀ ಕೆ. ಕೆ. ಶೆಟ್ಟಿ ಅಹಮದ್ ನಗರ, ಮಹಾರಾಷ್ಟ್ರ ಇವರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಕಲಾಭಿಮಾನಿಗಳಾದ ಶ್ರೀ ಶಿವರಾಮ ಭಟ್ ಕಾರಿಂಜೆ ಹಳೆಮನೆ ಇವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

