ಪತ್ರಿಕೋದ್ಯಮ ಶಿಕ್ಷಣ ಅಂದ್ರೇನೆ ವಿಭಿನ್ನ, ಇಲ್ಲಿ ಪ್ರಾಯೋಗಿಕವಾಗಿ ನಮ್ಮನ್ನು ನಾವು ತೊಡಗಿಸಿಕೊಂಡಾಗ ಮಾತ್ರ ಗುರಿ ತಲುಪಲು ಸಾಧ್ಯ. ವಿದ್ಯಾರ್ಥಿ ಜೀವನದಲ್ಲಿ ಬರುವ ಅವಕಾಶಗಳನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿ ಹಾಗೂ ಟಿವಿ9 ವೆಬ್ಸೈಟ್ ನ ಉಪ ಸಂಪಾದಕ ರಾಕೇಶ್ ನಾಯಕ್ ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣ ಜ್ಯ (ಸ್ವಾಯತ್ತ) ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ನಡೆದ ಮೊದಲ ಪತ್ರಕರ್ತ ಮೇಷ್ಟ್ರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಮಾಧ್ಯಮ ಲೋಕದಲ್ಲಿ ಹಲವಾರು ಅವಕಾಶಗಳಿವೆ, ಅದರಲ್ಲಿಯೂ ಮುದ್ರಣ ಮಾಧ್ಯಮದಲ್ಲಿ ಸಾಕಷ್ಟು ಸಾಧ್ಯತೆಗಳಿವೆ. ಜೋತೆಗೆ ಅನೇಕ ಪ್ರಚಲಿತ ಸುದ್ದಿಗಳಿಗೆ ಗಮನ ಹರಿಸುವುದು ಮುಖ್ಯ. ವೃತ್ತಿ ಜೀವನ ಇಲ್ಲಿ ಆರಂಭಿಸಿದರೆ ನಮ್ಮ ಬರವಣ ಗೆ, ಆಲೋಚನಾ ಶಕ್ತಿ ಇನ್ನಷ್ಟು ಅಭಿವೃದ್ಧಿಪಡಿಸಿಕೊಳ್ಳಬಹುದು ಎಂದು ತಿಳಿಸುವುದರ ಜೊತೆಗೆ ತಮ್ಮ ವೃತ್ತಿ ಜೀವನದ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಶ್ರೀಪ್ರಿಯ ಪಿ, ಸುತನ್ ಕೇವಳ ಉಪಸ್ಥಿತರಿದ್ದರು.
ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ನೀತ ರವೀಂದ್ರ ಸ್ವಾಗತಿಸಿ, ಹರಿಪ್ರಸಾದ್ ವಂದಿಸಿದರು. ವಿದ್ಯಾರ್ಥಿನಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

