ಯಕ್ಷಗಾನ ಕಲಾವಿದ ಪೇತ್ರಿ ಬಾಲಕೃಷ್ಣ ನಾಯಕ್ ನಿಧನ
ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ಪೇತ್ರಿ ಬಾಲಕೃಷ್ಣ ನಾಯಕ್ (59 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಇಂದು (21-12-2023) ನಿಧನ ಹೊಂದಿದರು.
ಎಲ್ಲಾ ಬಗೆಯ ವೇಷಗಳನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದ ಇವರು ಪಾರಂಪರಿಕ ಹೆಜ್ಜೆಗಾರಿಕೆ ಹಾಗೂ ಮಾತುಗಾರಿಕೆಗೆ ಖ್ಯಾತರಾಗಿದ್ದರು.
ಮಾಣಕಟ್ಟೆ, ಕಳವಾಡಿ, ಅಮೃತೇಶ್ವರಿ, ಮಂದಾರ್ತಿ, ಹಾಲಾಡಿ, ಮೇಗರವಳ್ಳಿ, ಮಡಾಮಕ್ಕಿ ಹಾಗೂ ಹಿರಿಯಡ್ಕ ಮೇಳ ಸೇರಿದಂತೆ ಸುಮಾರು ಮೂರೂವರೆ ದಶಕಗಳ ಕಾಲ ಯಕ್ಷಗಾನ ಕಲಾಸೇವೆಗೈದಿದ್ದಾರೆ.
ಇವರು ಓರ್ವ ಉತ್ತಮ ಪ್ರಸಾಧನ ತಜ್ಞರೂ ಆಗಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಯಕ್ಷನಿಧಿಯ ಸದಸ್ಯರಾಗಿದ್ದ ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

