ಇಂದು ಪುತ್ತೂರು ತಾಲೂಕು ಮಾಡಾವು ಅಯ್ಯಪ್ಪ ಭಜನಾ ಮಂದಿರದಲ್ಲಿ ಸತತ 11ನೇ ವರ್ಷದ, ಕಟೀಲು ಮೇಳದವರ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಇಂದು ಅಂದರೆ ಮಕರ ಸಂಕ್ರಾಂತಿಯ ಪ್ರಯುಕ್ತ ದಿನಾಂಕ 14.01.2024ನೇ ಆದಿತ್ಯವಾರದಂದು ಸಂಜೆ 6 ಘಂಟೆಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯರಿಂದ ‘ಶ್ರೀದೇವೀ ಲಲಿತೋಪಾಖ್ಯಾನ’ ಎಂಬ ಪ್ರಸಂಗದ ಪ್ರದರ್ಶನ ನಡೆಯಲಿದೆ.
ಅದಕ್ಕೂ ಮೊದಲು ಅಂದರೆ ಸಂಜೆ 4 ಘಂಟೆಯಿಂದ ಅಯ್ಯಪ್ಪ ಭಜನಾ ಮಂದಿರದಲ್ಲಿ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8 ಘಂಟೆಗೆ ಸರಿಯಾಗಿ ಅನ್ನಸಂತರ್ಪಣೆ ನಡೆಯಲಿದೆ.
ಈ ಬಾರಿಯ ಅನ್ನಸಂತರ್ಪಣೆಯ ಪ್ರಾಯೋಜಕತ್ವವನ್ನು ವಹಿಸಿಕೊಂಡವರು ಶ್ರೀ ವೆಂಕಟೇಶ್ವರ ಅರೆಪ್ಪಳ ಮತ್ತು ಅಜಯ್ ಕೃಷ್ಣ ಅರೆಪ್ಪಳ. ಈ ಎಲ್ಲಾ ಕಾರ್ಯಕ್ರಮಗಳಿಗೆ ಸಂಘಟಕರು ಸರ್ವರನ್ನೂ ಆದರದಿಂದ ಸ್ವಾಗತಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

