ಡಾ. ಅಮೃತಸೋಮೇಶ್ವರರು ಇಂದು (06.01.2024) ನಿಧನರಾದರು.
ಅವಿಭಜಿತ ದಕ್ಷಿಣಕನ್ನಡದ ಸುಮಾರು ಆರುದಶಕಗಳ ಸಾಂಸ್ಕೃತಿಕ ಚರಿತ್ರೆಯಲ್ಲಿ ಪ್ರಥಮ ಪಂಕ್ತಿಯ ಹೆಸರು ಅಮೃತಸೋಮೇಶ್ವರರದ್ದು. ಕವಿತೆ, ಪ್ರಬಂಧ, ನಾಟಕ, ಕತೆಗಳು, ಸಂಶೋಧನೆ ಹಲವು ವಿಭಾಗಗಳಲ್ಲಿ ಕೃಷಿ ನಡೆಸಿದವರು.
ಹೊಸತಲೆಮಾರನ್ನು ಗಾಢವಾಗಿ ಪ್ರಭಾವಿಸಿ, ತಮ್ಮ ಸುತ್ತಮುತ್ತಲಿನ ಸಮಾಜವನ್ನು ಕ್ರಿಯಾಶೀಲವಾಗಿ, ಚಿಂತನಶೀಲವಾಗಿ ಸಿದ್ಧಗೊಳಿಸಿದವರು. ಯಕ್ಷಗಾನ ಪ್ರಸಂಗ ರಚನೆ, ಕಾರ್ಯಾಗಾರಗಳ ಆಯೋಜನೆಯ ಮೂಲಕ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯ.
ಯಕ್ಷಗಾನ ಕೃತಿಗಳಲ್ಲಿ ನವಚಿಂತನೆಯನ್ನು ಗುಪ್ತಗಾಮಿನಿಯಾಗಿಸಿದವರು. ತುಳುಪ್ರಸಂಗಗಳಿಗೆ ಕನ್ನಡಕ್ಕಿಂತ ಕಡಿಮೆ ಇಲ್ಲದ ಘನತೆಯನ್ನು ನೀಡಿದವರು. ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಸ್ಮರಣೆಯಲ್ಲಿ ಯಕ್ಷಗಾನ ಕಲಾರಂಗ ನೀಡುವ ವಿದ್ವತ್ ಪ್ರಶಸ್ತಿಗೆ ಭಾಜನರಾಗಿದ್ದರು.
ಇವರ ಬದುಕು-ಸಾಧನೆಯ ಕುರಿತು ಯಕ್ಷಗಾನ ಕಲಾರಂಗವು ವಿಚಾರಗೋಷ್ಠಿಯನ್ನು ಆಯೋಜಿಸಿತ್ತು. ಸಂಸ್ಥೆಯು ಕಲೆ, ಕಲಾವಿದರು, ವಿದ್ಯಾರ್ಥಿಗಳಿಗಾಗಿ ಮಾಡುವ ಕೆಲಸ ಕಾರ್ಯಗಳ ಬಗ್ಗೆ ಅಪಾರ ಆದರಾಭಿಮಾನವನ್ನು ಹೊಂದಿದ್ದ ಇವರು ಕಾರ್ಯಕರ್ತರನ್ನು ಪ್ರೋತ್ಸಾಹಿಸುತ್ತಿದ್ದರು.
ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕರ್ ತೀವ್ರ ಸಂತಾಪ ಸೂಚಿಸಿದ್ದಾರೆ.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

