ಸುನಾದ ಸಂಗೀತ ಕಲಾಶಾಲೆ ಪುತ್ತೂರು, ಇದರ ವಾರ್ಷಿಕೋತ್ಸವವು ಇದೇ ಜನವರಿ ತಿಂಗಳ 13ರ ಶನಿವಾರ ಮತ್ತು 14ರ ಆದಿತ್ಯವಾರದಂದು ಪುತ್ತೂರಿನ ಸುದಾನ ವಸತಿಯುತ ಶಾಲೆಯ ಆವರಣದಲ್ಲಿ ನಡೆಯಲಿದೆ.

13.01.2024, ಶನಿವಾರ ಮಧ್ಯಾಹ್ನ ಘಂಟೆ 2ಕ್ಕೆ ಸರಿಯಾಗಿ ದೀಪೋಜ್ವಲನದೊಂದಿಗೆ ಆರಂಭವಾಗಲಿರುವ ಕಾರ್ಯಕ್ರಮ ಮರುದಿನ ಅಂದರೆ ದಿನಾಂಕ 14.01.2024ರ ಆದಿತ್ಯವಾರ ರಾತ್ರಿಯ ವರೆಗೆ ಮುಂದುವರಿಯಲಿದೆ.
13.01.2024, ಶನಿವಾರ ಮಧ್ಯಾಹ್ನ ಘಂಟೆ 2ಕ್ಕೆ ಸರಿಯಾಗಿ ದೀಪೋಜ್ವಲನದ ನಂತರ ಗುರುವಂದನೆ ಕಾರ್ಯಕ್ರಮ ನಡೆಯಲಿದೆ.
ದೇಶಾದ್ಯಂತ ಅಸಂಖ್ಯಾತ ಶಿಷ್ಯ ವೃಂದದವರನ್ನು ಹೊಂದಿರುವ, ಮಾತ್ರವಲ್ಲದೆ ವಿದೇಶದಲ್ಲೂ ಶಿಷ್ಯವರ್ಗವನ್ಮು ಹೊಂದಿರುವ ಕರ್ನಾಟಕ ಸಂಗೀತದ ಅದ್ವಿತೀಯ ಮೃದಂಗಪಟು ವಿದ್ವಾನ್ ಕಾಂಚನ ಈಶ್ವರ ಭಟ್ ಇವರಿಗೆ ಸುನಾದ ಸಂಗೀತ ಕಲಾಶಾಲೆಯ ವಿದ್ಯಾರ್ಥಿಗಳು ಗುರುವಂದನೆ ಸಲ್ಲಿಸಲಿದ್ದಾರೆ.
ಬಳಿಕ ಎರಡೂ ದಿನಗಳಲ್ಲಿ ಕಲಾ ಶಲೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಮರುದಿನ 14. 01.2024 ಆದಿತ್ಯವಾರ ವಿದ್ವಾನ್ ಪಾಲ್ಘಾಟ್ ರಾಮಪ್ರಸಾದ್ ಅವರಿಂದ ಶಾಸ್ತ್ರೀಯ ಸಂಗೀತ ಗಾಯನ ನಡೆಯಲಿದೆ.
ಕಾರ್ಯಕ್ರಮದ ಎಲ್ಲಾ ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ.


- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

