ಕಾಲೇಜು ವ್ಯಾಸಂಗ ಮಾಡುತ್ತಿದ್ದ ಹುಡುಗಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ನಡೆದದ್ದು ತೀರ್ಥಹಳ್ಳಿಯ ಬಿಳುಕೊಪ್ಪ ಗ್ರಾಮದಲ್ಲಿ.
ಮೃತ ವಿದ್ಯಾರ್ಥಿನಿ ಅಧೀಕ್ಷಾ (20) ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ತರಗತಿಯಲ್ಲಿ ಓದುತ್ತಿದ್ದಳು. ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಕೊರಳೊಡ್ಡಿದ್ದಾಳೆ.
ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ದೇಹವನ್ನು ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೃತ ಯುವತಿ ಅಧೀಕ್ಷಾ ಬೆಳಗ್ಗೆ ಎಷ್ಟು ಹೊತ್ತಾದರೂ ಹೊರಗೆ ಬರದೇ ಇದ್ದಿದ್ದರಿಂದ ಅನುಮಾನಗೊಂಡ ಮನೆಯವರು ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿರುವ ವಿಚಾರ ಅರಿವಿಗೆ ಬಂದಿದೆ.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

