ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ ನಿಧನ
ತೆಂಕುತಿಟ್ಟಿನ ಪರಂಪರೆಯ ಪ್ರಾತಿನಿಧಿಕ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ (82) ಇಂದು (24.01.2024) ಬಂಟ್ವಾಳ ತಾಲೂಕಿನ ಪೆರುವಾಯಿಯಲ್ಲಿ ನಿಧನರಾದರು.
ಅಳಿಕೆ ರಾಮಯ್ಯ ರೈಯವರಲ್ಲಿ ಯಕ್ಷಗಾನ ಅಭ್ಯಾಸ ಮಾಡಿ 12ರ ಹರೆಯದಲ್ಲಿ ಯಕ್ಷಗಾನ ರಂಗ ಪ್ರವೇಶಿಸಿದ ಇವರು ಇರಾ, ಧರ್ಮಸ್ಥಳ, ಕಟೀಲು, ಬಪ್ಪನಾಡು, ಕದ್ರಿ, ಪುತ್ತೂರು ಮೇಳಗಳಲ್ಲಿ ಸುಮಾರು ಆರು ದಶಕಗಳ ಕಲಾಸೇವೆಗೈದಿರುತ್ತಾರೆ.
ರಕ್ತಬೀಜ, ಹಿರಣ್ಯಕಶಿಪು, ಕಂಸ, ಋತುಪರ್ಣ, ಹನುಮಂತ ಮೊದಲಾದ ಪೌರಾಣಿಕ ಪಾತ್ರಗಳಲ್ಲಿ ಸಿದ್ಧಿ-ಪ್ರಸಿದ್ಧಿ ಪಡೆದಿದ್ದರು. ತುಳು ಪ್ರಸಂಗದಲ್ಲಿಯೂ ತಮ್ಮದೇ ಆದ ಛಾಪನ್ನು ಮೂಡಿಸಿದವರು.
ತಾಳ ಮದ್ದಲೆ, ಅರ್ಥಧಾರಿಯಾಗಿಯೂ ಭಾಗವಹಿಸುತ್ತಿದ್ದರು. ಇವರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
2009ರಲ್ಲಿ ಯಕ್ಷಗಾನ ಕಲಾರಂಗವು ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿತ್ತು. ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು

