ಸಿರಿಬಾಗಿಲು ಪ್ರತಿಷ್ಠಾನಕ್ಕೆ ಪಂಜ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಗೌರವ
ಫೆಬ್ರವರಿ 5, ಪಂಜ::ಗಡಿನಾಡು ಕಾಸರಗೋಡಿನ ಶ್ರೇಷ್ಠ ಸಂಸ್ಥೆ ಸಿರಿಬಾಗಿಲು ವೆಂಕಪ್ಷಯ್ಯ ಸಾಂಸ್ಕೃತಿಕ ಪ್ರತಿಷ್ಠಾನಕ್ಕೆ ಸುಳ್ಯ ತಾಲೂಕಿನ ಪಂಜದಲ್ಲಿ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಗೌರವಿಸಲಾಯಿತು.
ಗಡಿನಾಡು ಕಾಸರಗೋಡಿನಲ್ಲಿ ಸಾಂಸ್ಕೃತಿಕ ಭವನದ ಮೂಲಕ ,ಕನ್ನಡ- ಸಂಸ್ಕೃತಿ- ಸಾಹಿತ್ಯ- ಕಲೆಯ ಸಮಗ್ರ ಅಧ್ಯಯನಕ್ಕೆ ವಿವಿಧ ಅಧ್ಯಯನ ಯೋಗ್ಯ ಚಟುವಟಿಕೆ ನಡೆಸುತ್ತಿರುವ ಪ್ರತಿಷ್ಠಾನವು, ಭವನದಲ್ಲಿ ತೆಂಕುತಿಟ್ಟು ಯಕ್ಷಗಾನ ಮ್ಯೂಸಿಯಂ- ಪುಸ್ತಕ ಭಂಡಾರ- ಪುಸ್ತಕ ಪ್ರಕಾಶ -ಕೀರ್ತಿಶೇಷ ಕಲಾವಿದರ ಭಾವಚಿತ್ರ ಅನಾವರಣ ಉಂಟಾದ ಯೋಜನೆ ಹಮ್ಮಿಕೊಂಡು ಯಶಸ್ವಿಯಾಗಿದೆ.

ಕಳೆದ ಡಿಸೆಂಬರು 26 ರಂದು ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆ ಯವರಿಂದ ಲೋಕಾರ್ಪಣೆಯಾಗಿರುತ್ತದೆ .
ಶ್ರೀ ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟದ ಸಂದರ್ಭದಲ್ಲಿ ಡಾಕ್ಟರ್ ಅನಿಲ್ ಕುದುಮಾರುಬೆಟ್ಟು ಅವರು ಪ್ರತಿಷ್ಠಾನಕ್ಕೆ ಗೌರವಫಲಕ ನೀಡಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಮೇಳದ ಪ್ರಬಂಧಕರಾದ ಶ್ರೀ ಬಿ. ಯನ್. ಗಿರೀಶ ಹೆಗ್ಡೆ ಯವರು ಅಭಿನಂದನಾ ಭಾಷಣ ಮಾಡಿದರು,
ಕಲಾಭಿಮಾನಿಗಳಾದ ಡಾ. ಸತ್ಯನಾರಾಯಣ ಕಾವು, ವಿಜಯ ಭಟ್ ಪಂಜ ಉಪಸ್ಥಿತರಿದ್ದರು. ಶ್ರೀ ಜಯರಾಮ ಕಲ್ಲಂಜೆ ಯವರು ನಿರೂಪಿಸಿದರು..ಭಾಗವಹಿಸಿದ ಸಹಸ್ರಾರು ಕಲಾಭಿಮಾನಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಿತು.
ಬಳಿಕ ಶ್ರೀ ಧರ್ಮಸ್ಥಳ ಮೇಳದ ವರಿಂದ ಕಾರುಣ್ಯಾಂಬುಧಿ ಶ್ರೀ ರಾಮ ಯಕ್ಷಗಾನ ಬಯಲಾಟ ನಡೆಯಿತು.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
