ದಿನಾಂಕ. 18.02.2024ರಂದು ಅಣ್ಣೇರಪಾಲು ಕೊಣಾಜೆ ಎಂಬಲ್ಲಿ ನಡೆದ ಯಕ್ಷಗಾನ ಬಯಲಾಟದ ಸಂದರ್ಭದಲ್ಲಿ ಕಟೀಲು ನಾಲ್ಕನೇ ಮೇಳದ ನೇಪಥ್ಯ ಕಲಾವಿದರನ್ನು ಸನ್ಮಾನಿಸಿ ಗೌರವಿಸಲಾಯಿತು.
ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ, ಅಣ್ಣೇರಪಾಲು, ಕೊಣಾಜೆ ಇವರ ಸೇವೆಯಾಟವಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ (ನಾಲ್ಕನೇ ಮೇಳ) ಬಯಲಾಟವನ್ನು ಪ್ರದರ್ಶಿಸಲಾಯಿತು.
ಆ ಸಂದರ್ಭದಲ್ಲಿ ಕಟೀಲು ನಾಲ್ಕನೇ ಮೇಳದ ನೇಪಥ್ಯ ಕಲಾವಿದರಾದ ಶ್ರೀ ತನಿಯಪ್ಪ ಜೋಗಿಯವರಿಗೆ ಸನ್ಮಾನದ ಗೌರವವನ್ನು ಸಲ್ಲಿಸಲಾಯಿತು.

ತನಿಯಪ್ಪ ಜೋಗಿ ಇವರು ಪ್ರಸ್ತುತ ಕಟೀಲು 4ನೇ ಮೇಳದ ನೇಪಥ್ಯ ಕಲಾವಿದ. ಸರಳ ಸಜ್ಜನ ಹಾಗೂ ವಿನಯವಂತ. ಚೌಕಿಯಲ್ಲಿ ಇವರು ಎಲ್ಲರಿಗೂ ಪ್ರಿಯರು. ತನಗೆ ಒಪ್ಪಿಸಿದ ಕೆಲಸವನ್ನು ಚಾಚೂ ತಪ್ಪದೆ ಒಪ್ಪವಾಗಿ ಮಾಡಿ ಪೂರೈಸುತ್ತಾರೆ. ಇವರು 1954ನೇ ಇಸವಿ ಅಣ್ಣಪ್ಪ ಜೋಗಿ ಮತ್ತು ಸುಶೀಲ ದಂಪತಿಗಳಿಗೆ ಮಗನಾಗಿ ಜನಿಸಿದರು. ಹುಟ್ಟೂರು ಕಾಸರಗೋಡು ಜಿಲ್ಲೆಯ ಜೋಡುಕಲ್ಲು.
1970ನೇ ಇಸವಿ ನೇಪಥ್ಯ ಕಲಾವಿದನಾಗಿ ಕಲಾಸೇವೆ ಆರಂಭಿಸಿದರು. ಮೊದಲು ಶ್ರೀ ನಾಗರಾಜ ಶೆಟ್ರ ಕುಂಡಾವು ಮೇಳದಲ್ಲಿ 2 ವರ್ಷ, ನಂತರ ಕರ್ನಾಟಕ ಮೇಳದಲ್ಲಿ 12 ವರ್ಷಗಳ ಕಲಾಸೇವೆ. ತನಿಯಪ್ಪ ಜೋಗಿ ನಂತರ ಕಣಿಪುರ ಮೇಳದಲ್ಲಿ 1 ತಿರುಗಾಟ. ಪ್ರಸ್ತುತ ಕಟೀಲು ಮೇಳದಲ್ಲಿ ಹಲವಾರು ವರ್ಷಗಳಿಂದ ತಿರುಗಾಟ ನಡೆಸುತ್ತಿದ್ದಾರೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
