ಯಕ್ಷಧ್ರುವ ಪಟ್ಲ ಫೌಂಡೇಶನ್,ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ, ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ, ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2023-24,ಫೆ.6, ರಂದು ಮೂಡುಬಿದಿರೆಯಲ್ಲಿ ಆಯೋಜಿಸಿತ್ತು.
ಇಲ್ಲಿ ಏರ್ಪಡಿಸಿದ್ದ ಯಕ್ಷಗಾನ ಮುಖವರ್ಣಿಕೆ ಸ್ಪರ್ಧೆಯಲ್ಲಿ ಬ್ರಹ್ಮಾವರ ಲಿಟ್ಲ್ ರಾಕ್ ಶಿಕ್ಷಣ ಸಂಸ್ಥೆಯ 9ನೇ ತರಗತಿಯ ಮಾನ್ಯಾ ಜಿ.ಭಂಡಾರಿ ಪ್ರಥಮ ಸ್ಥಾನ(₹5000), ವಿದ್ಯೋದಯ ಪಬ್ಲಿಕ್ ಸ್ಕೂಲ್ ನ 7ನೇ ತರಗತಿಯ ಶ್ರಾವ್ಯಾ ಯು. ದ್ವಿತೀಯ ಸ್ಥಾನ(₹3000),
ಯಕ್ಷ ಜ್ಞಾನ ಪರೀಕ್ಷಾ ಸ್ಪರ್ಧೆಯಲ್ಲಿ ವಳಕಾಡು ಸರಕಾರಿ ಪ್ರೌಢಶಾಲೆಯ 8ನೇ ತರಗತಿಯ ಮೇಧಾ ದ್ವಿತೀಯ ಸ್ಥಾನ(₹3000) ಗಳಿಸಿದ್ದು, ಇವರಿಗೆ ಸ್ಮರಣಿಕೆ, ಪ್ರಶಂಸಾಪತ್ರ, ನಗದು ಪುರಸ್ಕಾರಗಳನ್ನು
ಯಕ್ಷಧ್ರುವ ಯಕ್ಷಶಿಕ್ಷಣದ ಪ್ರಧಾನ ಸಂಚಾಲಕರಾದ ಪಣಂಬೂರು ವಾಸುದೇವ ಐತಾಳ ಹಾಗೂ ಸಂಯೋಜಕರಾದ ದಿವಿತ್ ಎಸ್.ಕೋಟ್ಯಾನ್ 24-2-2024 ರಂದು ಯಕ್ಷಗಾನ ಕಲಾರಂಗದ ಕಚೇರಿಯಲ್ಲಿ ಪ್ರದಾನ ಮಾಡಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

