ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕುಡಿತದ ಅಮಲಿನಲ್ಲಿ ವ್ಯಕ್ತಿ ಪತ್ನಿಯನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ತನ್ನ ಪತ್ನಿಯ ಶವದೊಂದಿಗೆ 4 ದಿನಗಳ ಕಾಲ ವಾಸವಾಗಿದ್ದ. ಅವರ ಮಲಗುವ ಕೋಣೆಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಗಾಜಿಯಾಬಾದ್ನಲ್ಲಿ ತನ್ನ ಪತ್ನಿಯನ್ನು ಕತ್ತು ಹಿಸುಕಿ ಆಕೆಯ ಮೃತದೇಹವನ್ನು ನಾಲ್ಕು ದಿನಗಳ ಕಾಲ ತಮ್ಮ ನಿವಾಸದಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ 55 ವರ್ಷದ ವ್ಯಕ್ತಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಭರತ್ ಸಿಂಗ್ ಮದ್ಯದ ಅಮಲಿನಲ್ಲಿ ನೆರೆಹೊರೆಯವರ ಬಳಿ ನಡೆದ ಘಟನೆಯನ್ನು ತಿಳಿಸಿದ್ದ ಎನ್ನಲಾಗಿದೆ.
ಅವರ ಅಪಾರ್ಟ್ಮೆಂಟ್ನಿಂದ ವಿಪರೀತ ವಾಸನೆ ಬರಲಾರಂಭಿಸಿದಾಗ ಪೊಲೀಸರಿಗೆ ಮಾಹಿತಿ ನೀಡಲಾಯಿತು.
ಆರೋಪಿಯನ್ನು ತಕ್ಷಣ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೌಟುಂಬಿಕ ಕಲಹದ ವೇಳೆ 51 ವರ್ಷದ ಪತ್ನಿ ಸುನೀತಾಳನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. 3 ರಿಂದ 4 ದಿನಗಳ ಹಳೆಯದಾದ ಮಹಿಳೆಯ ಮೃತದೇಹ ಕೊಳೆಯಲು ಪ್ರಾರಂಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಸುನೀತಾ ಅವರ ಮೊದಲ ಪತಿ ನಿಧನರಾಗಿದ್ದರು ಮತ್ತು ಭರತ್ ಮೊದಲ ಹೆಂಡತಿಯಿಂದ ದೂರವಾಗಿದ್ದರು. ಹಾಗಾಗಿ ಇಬ್ಬರಿಗೂ ಇದು ಎರಡನೇ ಮದುವೆ.
ಭರತ್ ತನ್ನ ಎರಡನೇ ಪತ್ನಿಯನ್ನು ಮದ್ಯದ ಅಮಲಿನಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದ. ಭರತ್ ಮದ್ಯದಂಗಡಿಯಲ್ಲಿ ಮಾರಾಟಗಾರನಾಗಿ ಕೆಲಸ ಮಾಡುತ್ತಿದ್ದ.
ಮಹಿಳೆಯ ಪುತ್ರನ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಭರತ್ ನನ್ನು ಬಂಧಿಸಲಾಗಿದೆ.
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ

