ಕೊಂಡದಕುಳಿ ಅವರಿಗೆ ‘ಯಕ್ಷ ವಿದ್ಯಾಮಾನ್ಯ’ ಪ್ರಶಸ್ತಿ ಪ್ರದಾನ.
ಇಂದು (23.04.2024) ಪಲಿಮಾರಿನಲ್ಲಿ ನಡೆದ ಹನುಮ ಜಯಂತಿಯ ಸಂದರ್ಭದಲ್ಲಿ ಪಲಿಮಾರು ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ತಮ್ಮ ಗುರುಗಳಾದ ಶ್ರೀ ವಿದ್ಯಾಮಾನ್ಯ ಶ್ರೀಪಾದರ ಹೆಸರಿನಲ್ಲಿ ಪ್ರತೀವರ್ಷ ಕೊಡಮಾಡುವ ‘ಯಕ್ಷ ವಿದ್ಯಾಮಾನ್ಯ’ ಪ್ರಶಸ್ತಿಯನ್ನು ಬಡಗುತಿಟ್ಟಿನ ಶ್ರೇಷ್ಠ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆಯವರಿಗೆ ಪ್ರದಾನ ಮಾಡಿದರು.
ಈ ಪ್ರಶಸ್ತಿನ 50,000/- ನಗದು ಪುರಸ್ಕಾರಗಳನ್ನೊಳಗೊಂಡಿದೆ. ಶ್ರೀ ಕಾಣ ಯೂರು, ಶ್ರೀ ಸೋದೆ, ಶ್ರೀ ಭೀಮನಕಟ್ಟೆ ಹಾಗೂ ಪಲಿಮಾರು ಕಿರಿಯ ಶ್ರೀಪಾದಂಗಳವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಪಲಿಮಾರು ಶ್ರೀಗಳು ಎರಡು ದಶಕಗಳ ಹಿಂದೆ ಕೊಂಡದಕುಳಿಯವರು ನಿರ್ವಹಿಸಿದ ಹನುಮಂತನ ಪಾತ್ರ ಇಂದಿಗೂ ನನ್ನ ಮನಸ್ಸಿನಲ್ಲಿ ಹಸಿರಾಗಿದೆ. ಇಂತಹ ಶ್ರೇಷ್ಠ ಕಲಾವಿದ ಇನ್ನಷ್ಟು ಸಮಯ ರಂಗದಲ್ಲಿ ಪಾತ್ರನಿರ್ವಹಿಸುವಂತಾಗಲಿ ಎಂದು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು.
ಪ್ರಶಸ್ತಿ ಸ್ವೀಕರಿಸಿದ ಕೊಂಡದಕುಳಿಯವರು ಈ ದಿನ ನನ್ನ ಪಾಲಿಗೆ ಸಂತಸದ ಕ್ಷಣ, ಕಲಾವಿದನಾದವನು ಅಧ್ಯಯನಶೀಲನಾಗಿರಬೇಕು. ಕಲಾವಿದರು ತಪಸ್ವಿಗಳು ಎಂದು ಪೇಜಾವರ ವಿಶ್ವೇಶ ತೀರ್ಥರು ಹೇಳಿದ ಮಾತನ್ನು ನೆನಪಿಸಿಕೊಂಡರು.
ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಅಭಿನಂದನೆಯ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಕೊಂಡದಕುಳಿಯವರ ಪತ್ನಿ ಚೇತನಾ ಹೆಗಡೆ, ಯಕ್ಷಗಾನ ಕಲಾರಂಗದ ಅದ್ಯಕ್ಷ ಎಂ. ಗಂಗಾಧರ ರಾವ್, ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಉಪಸ್ಥಿತರಿದ್ದರು
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ