ಯು. ಶ್ರೀಧರ್ ಅವರು ಬರೆದ ‘ಉಡುಪಿ ಪರ್ಯಾಯವೂ, ಮಟ್ಟಿ (ವಾದಿರಾಜ) ಗುಳ್ಳವೂ ಮತ್ತು ಇತರ ಆಯ್ದ ಲೇಖನಗಳು’ ಪುಸ್ತಕ ಎಪ್ರಿಲ್ 21ರಂದು ಲೋಕಾರ್ಪಣೆ ಗೊಂಡಿತು.

ಯಕ್ಷಗಾನ ಕಲಾರಂಗದ ನೂತನ ಕಟ್ಟಡದಲ್ಲಿ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಕೃತಿ ಬಿಡುಗಡೆ ಮಾಡಿ ಯು. ಶ್ರೀಧರರು ಇಳಿ ವಯಸ್ಸಿನಲ್ಲೂ ಮಾಡುತ್ತಿರುವ ಸಾಹಿತ್ಯ ಮತ್ತು ಸಾಮಾಜಿಕ ಕೆಲಸಗಳನ್ನು ಮೆಚ್ಚಿಕೊಂಡರು.
ವರ್ಷದ ಹಿಂದೆ ಗತಿಸಿದ ತಮ್ಮ ಪತ್ನಿ ಸುಗುಣಾಳ ನೆನಪಿಗೆ ಈ ಕೃತಿಯನ್ನು ಸಮರ್ಪಿಸಿದ ಲೇಖಕರು ಮಾರಾಟದಿಂದ ಬಂದ ಹಣವನ್ನು ವಿದ್ಯಾಪೋಷಕ್ ಗೆ ನೀಡುವುದಾಗಿ ಹೇಳಿದರು.
ಇದು ಈ ಲೇಖಕರ ಹತ್ತನೆಯ ಕೃತಿಯಾಗಿದೆ.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್, ಯು. ಹರಿಶ್ಚಂದ್ರ, ರವಿ .ಎಂ ಅಮೀನ್, ನಾರಾಯಣ ಎಂ. ಹೆಗಡೆ, ಡಾ. ವಿರೂಪಾಕ್ಷ ದೇವರುಮನೆ, ಎಚ್. ಎನ್. ವೆಂಕಟೇಶ್ ಉಪಸ್ಥಿತರಿದ್ದರು.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

