ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
ಉಡಪಿಯ ಯಕ್ಷಗಾನ ಕಲಾರಂಗ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣೆಯಲ್ಲಿ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಹಿರಿಯ ಯಕ್ಷಗಾನ ಕಲಾವಿದ, ವಿದ್ವಾಂಸ ಗುರುರಾಜ ಮಾರ್ಪಳ್ಳಿ ಆಯ್ಕೆಯಾಗಿದ್ದಾರೆ.

ಮಾರ್ಪಳ್ಳಿಯವರು ಯಕ್ಷಗಾನವಲ್ಲದೆ ನಾಟಕ, ಸಿನೇಮಾ, ಸಂಗೀತಾ, ಶಿಲ್ಪ, ಸಾಹಿತ್ಯ ಹೀಗೆ ಕಲೆಯ ಬಹು ಆಯಾಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಬಹುಮುಖೀ ಕಲಾಸಾಧಕರಾಗಿದ್ದಾರೆ.
ಪ್ರಶಸ್ತಿಯು ಪ್ರಶಸ್ತಿ ಪರಿಕರ ಸಹಿತ ರೂ. 40000/- ನಗದು ಪುರಸ್ಕಾರ ಒಳಗೊಂಡಿದೆ.
ಪ್ರಶಸ್ತಿ ಪ್ರದಾನ ಸಮಾರಂಭ ಮೇ 19 ಭಾನುವಾರ ಸಂಜೆ 5 ಗಂಟೆಗೆ ಯಕ್ಷಗಾನ ಕಲಾರಂಗದ ನೂತನ ಕಟ್ಟಡದ ಐವೈಸಿ ಸಭಾಂಗಣದಲ್ಲಿ ಪ್ರಶಸ್ತಿ ಸ್ಥಾಪಕ ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ಅತಿಥಿ ಗಣ್ಯರ ಸಮಕ್ಷ ಜರಗಲಿದೆಯೆಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

