ಯಕ್ಷಗಾನ ಗುರುಗಳ ಸಮಾಲೋಚನಾ ಸಭೆ
ಯಕ್ಷಶಿಕ್ಷಣ ಟ್ರಸ್ಟ್( ರಿ) ಉಡುಪಿ ಕಳೆದ 17 ವರ್ಷಗಳಿಂದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ನೀಡುತ್ತಿದ್ದು, ಈ ವರ್ಷ ಶಾಸಕರಾದ ಗುರುರಾಜ ಗಂಟಿಹೊಳೆಯವರ ಅಪೇಕ್ಷೆಯಂತೆ ಬೈಂದೂರು ವಿಧಾನಸಭಾ ವ್ಯಾಪ್ತಿಯ 11 ಶಾಲೆಗಳು ಸೇರಿ ಒಟ್ಟೂ 91 ಶಾಲೆಗಳಲ್ಲಿ ಯಕ್ಷಶಿಕ್ಷಣ ನಡೆಸಲು ಯೋಜಿಸಿದೆ.
ಈ ಪ್ರಯುಕ್ತ ಯಕ್ಷಗಾನ ಗುರುಗಳ ಸಮಾಲೋಚನಾ ಸಭೆ 12.06.2024 ರಂದು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದ ಹೊರಾಂಗಣದಲ್ಲಿ ಜರಗಿತು.
ಉಡುಪಿ ಕ್ಷೇತ್ರದ ಶಾಸಕ, ಟ್ರಸ್ಟ್ ನ ಅಧ್ಯಕ್ಷ ಯಶ್ಪಾಲ್ ಸುವರ್ಣ ಮಾತನಾಡಿ, ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯನಿರ್ವಹಣೆಯಲ್ಲಿ ಕಲಾರಂಗದ ಕಾರ್ಯಕರ್ತರ ದುಡಿಮೆ ದೊಡ್ಡದು, ನಾವೆಲ್ಲ ಒಟ್ಟಾಗಿ ಈ ಮಹಾಭಿಯನವನ್ನು ಯಶಸ್ವಿಯಾಗಿಸೋಣ ಎಂದರು.
ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಮಾತನಾಡಿ ಮಕ್ಕಳಿಗೆ ಸಂಸ್ಕಾರ ನೀಡುವ ಈ ಕಲಾಪ್ರಕಾರ ಉಳಿಸಿ ಬೆಳೆಸುವಲ್ಲಿ ಯಕ್ಷ ಗುರುಗಳ ಕೊಡುಗೆ ಮಹತ್ತ್ವದ್ದು ಎಂದು ಅಭಿಪ್ರಾಯ ಪಟ್ಟರು.
ಹಿರಿಯ ಟ್ರಸ್ಟಿ ಎಸ್. ವಿ. ಭಟ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಗುರುಗಳಿಗೆ ಉಪಯುಕ್ತ ಮಾಹಿತಿ ನೀಡಿದರು. ಕೋಶಾಧಿಕಾರಿ ಎಚ್. ಎನ್ ಶೃಂಗೇಶ್ವರ, ಟ್ರಸ್ಟಿಗಳಾದ ವಿ. ಜಿ. ಶೆಟ್ಟಿ, ನಾರಾಯಣ ಎಂ. ಹೆಗಡೆ, ಮೀನಾಲಕ್ಷಣ ಅಡ್ಯಂತಾಯ, ಗಣೇಶ್ ಬ್ರಹ್ಮಾವರ, ನಾಗರಾಜ ಹೆಗಡೆ ಉಪಸ್ಥಿತರಿದ್ದರು.
40 ಕಲಾವಿದರು ಗುರುಗಳಾಗಿ ಸೇವೆ ಸಲ್ಲಿಸಲಿರುವರು. ಗುರುಗಳಿಗೆ ಶಾಲೆಗಳನ್ನು ಹಂಚಿಕೆಮಾಡಿ ಅಗತ್ಯ ಸೂಚನೆ ನೀಡಲಾಯಿತು.
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ

