ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ
ಹಿರಿಯ ಯಕ್ಷಗಾನ ಅರ್ಥಧಾರಿ ಮೂಡಂಬೈಲು ಸಿ.ಗೋಪಾಲಕೃಷ್ಣ ಶಾಸ್ತ್ರಿ ಇವರನ್ನು ಬೆಳ್ತಂಗಡಿ ತಾಲೂಕಿನ ಪಡಂಗಡಿ ಶ್ರೀನಿಲಯದಲ್ಲಿ
ಪುತ್ತೂರು ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಅಧ್ಯಕ್ಷರಾದ ಭಾಸ್ಕರ ಬಾರ್ಯ ಮತ್ತು ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಗೌರವಿಸಿದರು.
ಶ್ರೀಮತಿ ಸ್ವರ್ಣಲತಾ ಭಾಸ್ಕರ್ ಉಪಸ್ಥಿತರಿದ್ದರು.
88 ವರ್ಷದ ಹಿರಿಯ ವಿದ್ವಾಂಸರಾದ ಶಾಸ್ತ್ರಿಯವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ, ದಶಾವತಾರ ಉಪನ್ಯಾಸಗಳು, ಅರ್ಥ ಸಹಿತ ಕುಮಾರ ವಿಜಯ ಮುಂತಾದ ಅಪೂರ್ವ ಕೃತಿಗಳನ್ನು ರಚಿಸಿದ್ದು ಯಕ್ಷಗಾನ ಆಸಕ್ತರಿಗೆ ಉಪಯುಕ್ತವಾದ ಕೃತಿಗಳಾಗಿವೆ.
ಶೇಣಿ, ಸಾಮಗ, ಪೆರ್ಲ,ಕಾಂತ ರೈ , ಜೋಷಿ ಮೊದಲಾದ ಮಹಾನ್ ಕಲಾವಿದರೊಂದಿಗೆ ಅರ್ಥಧಾರಿಯಾಗಿ ಜನಪ್ರಿಯರಾಗಿದ್ದ ಇವರು ಕಳೆದ ಮೂರು ವರ್ಷಗಳಿಂದ ತಾಳಮದ್ದಳೆಯಲ್ಲಿ ಭಾಗವಹಿಸದೆ ಇದ್ದರೂ ವಿಶ್ರಾಂತ ಜೀವನದಲ್ಲಿ ತನ್ನ ಜ್ಞಾನ,ಅನುಭವಗಳನ್ನು ಕಲಾಸಕ್ತರ ಜೊತೆ ಹಂಚಿಕೊಳ್ಳುತ್ತ ಸಕ್ರಿಯವಾಗಿದ್ದಾರೆ.
- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES