ಜುಲೈ 1ರಿಂದ ಜುಲೈ 7ರ ವರೆಗೆ ಪುತ್ತೂರಿನಲ್ಲಿ ಅಮೋಘ ತಾಳಮದ್ದಳೆ ಸಪ್ತಾಹ ಜರಗಲಿದೆ.
ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಕಲಾ ಮಂದಿರದಲ್ಲಿ ದಿನಾಂಕ 01.07.2024ರಿಂದ 07.07.2024ರ ವರೆಗೆ ಯಕ್ಷಗಾನ ಕಲಾರಸಿಕರಿಗೆ ಅಮೋಘ ತಾಳಮದ್ದಳೆಗಳ ರಸದೌತಣ ಸಿಗಲಿದೆ.
ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಆಶ್ರಯದಲ್ಲಿ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ಇವರು ಪ್ರಸ್ತುತಪಡಿಸುವ, ಭಾಗವತ ಪದ್ಯಾಣ ಗಣಪತಿ ಭಟ್ ಸಂಸ್ಮರಣೆ, ಕುರಿಯ ಮತ್ತು ಪದ್ಯಾಣ ಪ್ರಶಸ್ತಿ ಪ್ರದಾನ ಮತ್ತು ಏಳು ದಿನಗಳಲ್ಲಿ ತಾಳಮದ್ದಳೆ ಕೂಟ ನಡೆಯಲಿದೆ.
ಈ ಬಾರಿಯ ಪದ್ಯಾಣ ಪ್ರಶಸ್ತಿಯನ್ನು ಭಾಗವತರಾದ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಮತ್ತು ಕುರಿಯ ಪ್ರಶಸ್ತಿಯನ್ನು ಹಿಮ್ಮೇಳ ಕಲಾವಿದರಾದ ಶ್ರೀ ಸೀತಾರಾಮ ತೋಳ್ಪಾಡಿತ್ತಾಯರಿಗೆ ನೀಡಲಾಗುತ್ತದೆ.
ವಿವರಗಳಿಗೆ ಚಿತ್ರಗಳನ್ನು ನೋಡಿ.
- ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 15 ಲಕ್ಷ ರೂಪಾಯಿಗಳ ಕೊಡುಗೆ
- ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ – ಇಸ್ರೇಲ್ ಅಧಿಕೃತ ಹೇಳಿಕೆ
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ
- 60ರ ಹರೆಯದ ಸಂಭ್ರಮದಲ್ಲಿರುವ ಸುಣ್ಣಂಬಳ ವಿಶ್ವೇಶ್ವರ ಭಟ್ಟರಿಗೆ ಇಂದು ಕಟೀಲು ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ ಸನ್ಮಾನ
- 30 ವರ್ಷಗಳ ಹಿಂದೆ ನಾಪತ್ತೆಯಾಗಿದ್ದವನ ಅಸ್ಥಿಪಂಜರ ಅಂಗಳದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ, ಉತ್ಖನನದ ನಂತರ ಬೆಚ್ಚಿ ಬಿದ್ದ ಪೊಲೀಸರು