ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಜುಲೈ 7ನೇ ತಾರೀಕು ಆದಿತ್ಯವಾರ ಮಧ್ಯಾಹ್ನ 2:30 ರಿಂದ ಶ್ರೀ ಸತ್ಯಸಾಯಿ ಸೇವಾ ಸಮಿತಿ ಪೆರ್ಲ ಇವರ ಸಹಭಾಗಿತ್ವದಲ್ಲಿ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ನಡೆಯಲಿದೆ.
ಶಿಬಿರವು ಶ್ರೀ ಗೋಪಾಲಕೃಷ್ಣ ಫಾರ್ಮಸಿ ಕುಂಬಳೆ, ಡಾ. ರವಿ ನಾರಾಯಣ ,ಸಂಜೀವಿನಿ ಕ್ಲಿನಿಕ್ ಪುತ್ತೂರು, ಶ್ರೀ ಸದ್ಗುರು ಡಿಸ್ಟ್ರಿಬ್ಯೂಟರ್ಸ್ ಕಬಕ ,ಸಿ ಕೆಮ್ ಫಾರ್ಮ್ ಸಿ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ನಡೆಯಲಿದೆ.
ಪ್ರಸಿದ್ಧ ವೈದ್ಯರಾದ ಡಾ. ಕೃಷ್ಣ ಮೋಹನ ಬಿ. ಆರ್. ಚಿನ್ಮಯ ಕ್ಲಿನಿಕ್ ಪೆರ್ಲ, ಡಾ. ಸತ್ಯನಾರಾಯಣ ಬಿ. ಪ್ರಶಾಂತಿ ಕ್ಲಿನಿಕ್ ಬಾಯಾರು ಶಿಬಿರವನ್ನು ನಡೆಸಿಕೊಡಲಿರುವರು.
ಅಧ್ಯಯನ ಯೋಗ್ಯ ಸಾಂಸ್ಕೃತಿಕ ಚಟುವಟಿಕೆಗಳ ಜೊತೆ ಪ್ರತಿಷ್ಠಾನ ಉಚಿತ ಆಯುರ್ವೇದ ಶಿಬಿರ ಹಾಗೂ ಮುಂದಿನ ದಿನಗಳಲ್ಲಿ ಸಮಾಜಕ್ಕೆ ಉಪಯುಕ್ತವಾಗುವ ಇನ್ನಿತರ ಶಿಬಿರಗಳನ್ನು ನಡೆಸಲಿದೆ ಎಂದು ಪ್ರತಿಷ್ಠಾನ ಪ್ರಕಟಣೆ ತಿಳಿಸಿದೆ.
- 150 ವರ್ಷಗಳ ವರೆಗೆ ಬದುಕಲು ದಂಪತಿಗಳ ಹೊಸ ತಂತ್ರ – ನವೀನ ಆವಿಷ್ಕಾರ, ಚಿಕಿತ್ಸೆಗಳಿಂದ ಇದು ಸಾಧ್ಯ ಎಂದು ತೋರಿಸಲು ಹೊರಟ ಗಂಡ-ಹೆಂಡತಿ!
- 10ನೇ ತರಗತಿ ವಿದ್ಯಾರ್ಥಿಯು ತನ್ನ ಶಿಕ್ಷಕಿಯ ಅಶ್ಲೀಲ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣ – 4 ಮಂದಿಯ ಬಂಧನ
- ಎದೆಯ ಒಂದು ಬದಿಯಲ್ಲಿ ಪ್ಲಾಸ್ಟರ್ ನೊಂದಿಗೆ ಆಸ್ಪತ್ರೆಯಿಂದ ಮನೆಗೆ ಮರಳಿದ ಗಾಯಕಿ ಅಮೃತಾ ಸುರೇಶ್
- ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು