Friday, September 20, 2024
Homeಸುದ್ದಿಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕ್ರಿಯಾಕರ್ತೃ ಗೋಪಾಲಕೃಷ್ಣ ಭಟ್ (ಅಪ್ಪಚ್ಚಿ) ನಿಧನ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕ್ರಿಯಾಕರ್ತೃ ಗೋಪಾಲಕೃಷ್ಣ ಭಟ್ (ಅಪ್ಪಚ್ಚಿ) ನಿಧನ

ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಕ್ರಿಯಾಕರ್ತೃ ಗೋಪಾಲಕೃಷ್ಣ ಭಟ್ (ಅಪ್ಪಚ್ಚಿ) ನಿಧನ ಹೊಂದಿದ್ದಾರೆ.

ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಸೇವೆಯ ಕ್ರಿಯಾಕರ್ತೃವಾಗಿ ಸೇವೆ ಸಲ್ಲಿಸುತ್ತಿದ್ದರು.

ನಿನ್ನೆ (19.08.2024) ದೇವಾಲಯದಲ್ಲಿ ತನ್ನ ಕರ್ತವ್ಯವನ್ನು ಪೂರೈಸಿದ್ದ ಅವರು ರಾತ್ರಿ ಎಂದಿನಂತೆ ಮಲಗಿದ್ದರು. ಆದರೆ ದುರದೃಷ್ಟವಶಾತ್ ಅವರು ಸುಮಾರು ಮಧ್ಯರಾತ್ರಿಯ ಹೊತ್ತಿನಲ್ಲಿ ಹೃದಯಾಘಾತದಿಂದ ನಿಧನರಾದರು.

ಸುಬ್ರಹ್ಮಣ್ಯದಲ್ಲಿಯೇ ವಾಸ್ತವ್ಯವಿದ್ದ ಅವರನ್ನು ಇಂದು (20.08.2024) ಮುಂಜಾನೆ ಸಹೋದ್ಯೋಗಿಗಳು ಎಬ್ಬಿಸಲು ಪ್ರಯತ್ನಿಸಿದಾಗ ಅವರು ಮೃತಪಟ್ಟಿರುವುದು ಅರಿವಿಗೆ ಬಂತು ಎಂದು ತಿಳಿದುಬಂದಿದೆ.

ಬೆಳ್ತಂಗಡಿ ತಾಲೂಕಿನ ಇಳಂತಿಲ ಸಮೀಪದ ನಿವಾಸಿಯಾಗಿದ್ದ ಅವರು ಸಹೋದ್ಯೋಗೀ ವಲಯದಲ್ಲಿ ಅಪ್ಪಚ್ಚಿ ಎಂದೇ ಗುರುತಿಸಲ್ಪಡುತ್ತಿದ್ದರು.

ಶ್ರೀಯುತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments