Friday, September 20, 2024
Homeಸುದ್ದಿಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ಪುತ್ತೂರು: ದಕ್ಷಿಣ ಕನ್ನಡದ ಪಿಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಗುರುವಾರ ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಿದ ರಸಾಯನಶಾಸ್ತ್ರ ವಿಷಯ ಸಂಬಂಧಿ ವಿವಿಧ ಸ್ಪರ್ಧೆಗಳಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಲವು ಬಹುಮಾನ ಗಳಿಸಿದ್ದಾರೆ.

ಪುತ್ತೂರು ಕರ್ಕುಂಜದ ಬಿ ಕೆ ಸುರೇಶ್ ಮತ್ತು ಜಯಂತಿ ಎಸ್ ದಂಪತಿಯ ಪುತ್ರಿ ಕೆ ಎಸ್ ಮನೀಷಾ ‘ಇಂಟರ್ಯಾಕ್ಟಿವ್ ಕೆಮಿಸ್ಟ್ರಿ’ ಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ವಿಟ್ಲದ ಜಗದೀಶ್ ವಿ ಮತ್ತು ಸಂಗೀತಾ ದಂಪತಿಯ ಪುತ್ರ ಚಿನ್ಮಯ್ ವಿ ಜೆ ‘ಡಾಕ್ಯುಮೆಂಟರಿ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಪುತ್ತೂರು ದರ್ಬೆಯ ಶಿವರಾಮ್ ಆಳ್ವ ಮತ್ತು ಸೀಮಾ ಆಳ್ವ ದಂಪತಿಯ ಪುತ್ರಿ ವರ್ಷಿಣ ಆಳ್ವ ಮತ್ತು ಸುಬ್ರಹ್ಮಣ್ಯದ ಕೆ ಸತೀಶ ಕಲ್ಲೂರಾಯ ಮತ್ತು ರೇಣುಕಾ ದಂಪತಿಯ ಪುತ್ರಿ ಧನ್ಯಶ್ರೀ ಕೆ ‘ಕೆಮ್ ರಂಗೋಲಿ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಈ ಸ್ಪರ್ಧೆಯಲ್ಲಿ ದ ಕ ಜಿಲ್ಲೆಯ 30 ವಿವಿಧ ಸಂಸ್ಥೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments