ರಾಜರ್ಷಿ, ಪದ್ಮವಿಭೂಷಣ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಗಡಿನಾಡು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದ ಹಾಗು ತೆಂಕು ತಿಟ್ಟು ಯಕ್ಷಗಾನದ ಬೃಹತ್ ಮ್ಯೂಸಿಯಂ ನ ಯೋಜನೆಯನ್ನು ಮೆಚ್ಚಿ.ಆರಂಭದಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣ ಕ್ಕೆ 10 ಲಕ್ಷ ರೂಪಾಯಿಗಳನ್ನು ನೀಡಿದ್ದರು
ಇದೀಗ ಪುನಃ ಶ್ರೀ ಮಂಜುನಾಥೇಶ್ವರ ಸ್ವಾಮಿಯ ಪ್ರಸಾದ ರೂಪವಾಗಿ 15 ಲಕ್ಷ ರೂಪಾಯಿಗಳ ಧನಸಹಾಯ ನೀಡಿ ಹರಸಿರುತ್ತಾರೆ.
ಕಳೆದ ಡಿಸೆಂಬರ್ ತಿಂಗಳಲ್ಲಿ ಸಾಂಸ್ಕೃತಿಕ ಭವನ, ಮ್ಯೂಸಿಯಂ ಲೋಕಾರ್ಪಣೆಗೊಳಿಸಿದ ಪೂಜ್ಯ ಖಾವಂದರು, ಯಕ್ಷಗಾನ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಅಧ್ಯಯನಕ್ಕೆ ಇದೊಂದು ದೊಡ್ಡ ಕೊಡುಗೆಯಾಗಲಿದೆ ಎಂದು ಶುಭ ಹಾರೈಸಿದ್ದರು.
ಇತ್ತೀಚೆಗೆ ಶ್ರೀ ಧರ್ಮಸ್ಥಳದ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಮೇಳದ ಯಜಮಾನರಾದ ಶ್ರೀ ಡಿ. ಹರ್ಷೇಂದ್ರ ಕುಮಾರ್ ಭೇಟಿ ನೀಡಿ ಇದೊಂದು ಕಲಾ ವಲಯದ ಅದ್ಬತ ಎಂದಿದ್ದರು.
ಪ್ರತಿಷ್ಠಾನದ ಅದ್ಯಕ್ಷ, ಶ್ರೀ ಧರ್ಮಸ್ಥಳ ಮೇಳದ ಪ್ರಧಾನ ಭಾಗವತ ಶ್ರೀ ರಾಮಕೃಷ್ಣ ಮಯ್ಯ ಅವರು ಪೂಜ್ಯರು ನೀಡಿದ ಆರ್ಥಿಕ ಸಹಕಾರವನ್ನು ಸ್ವೀಕರಿಸಿದರು.
ಪ್ರತಿಷ್ಠಾನದ ಕಾರ್ಯಕರ್ತರಾದ ಶ್ರೀ ಪ್ರಸನ್ನ ಕಾರಂತ ದೇಶಮಂಗಲ, ಶ್ರೀ ಶ್ರೀಮುಖ ಮಯ್ಯ, ಸಿರಿಬಾಗಿಲು ಜತೆಗಿದ್ದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

