ಜರ್ಮನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಉಜಿರೆಯ ಯುವಕ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಜರ್ಮನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಉಜಿರೆ ಸಮೀಪದ ನಿವಾಸಿ ಆದಿತ್ಯ ಭಟ್ ನಿನ್ನೆ ತನ್ನ ಸ್ವಗೃಹದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಉಜಿರೆಯ ಅತ್ತಾಜೆಯ ಅವರ ಮನೆಯಲ್ಲಿ ನಿನ್ನೆ ಅಕ್ಟೋಬರ್ 11ರಂದು ಆಯುಧ ಪೂಜೆಯ ಕಾರ್ಯಕ್ರಮ ಇತ್ತು. ಆ ಕೆಲಸದಲ್ಲಿ ಇರುವಾಗಲೇ ಅವರಿಗೆ ಒಮ್ಮೆಲೇ ಎದೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು.
ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಅತ್ತಾಜೆಯಲ್ಲಿ ವಾಸವಾಗಿರುವ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರರಾದ ಆದಿತ್ಯ ಭಟ್(29) ಅವರು ತಂದೆ, ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

