ಶ್ರೀ ವಿಶ್ವೇಶತೀರ್ಥ ಪ್ರಶಸ್ತಿಗೆ ಯಶಸ್ವೀ ಕಲಾವೃಂದ (ರಿ.) ಕೊಮೆ, ತೆಕ್ಕಟ್ಟೆ ಸಂಸ್ಥೆಯ ಆಯ್ಕೆ.
ಉಡುಪಿ : ಕಲಿಕೆಯೂ ಸೇರಿದಂತೆ ಯಕ್ಷಗಾನದ ಉಳಿವು, ಬೆಳವಣಿಗೆಗಾಗಿ ವಿಶಿಷ್ಟ ಕಾರ್ಯನಿರ್ವಹಿಸುತ್ತಾ, ರಜತ ಪರ್ವದ ಶುಭಾವಸರದಲ್ಲಿರುವ ಯಶಸ್ವೀ ಕಲಾವೃಂದ (ರಿ) ಕೊಮೆ, ತೆಕ್ಕಟ್ಟೆ ಸಂಸ್ಥೆಯು, ಯಕ್ಷಗಾನ ಕಲಾರಂಗ ಕೊಡಮಾಡುವ ಈ ಬಾರಿಯ ಪ್ರತಿಷ್ಠಿತ ‘ಶ್ರೀ ವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆಗೊಂಡಿದೆ.
ಯಕ್ಷಗಾನ ಕಲಾರಂಗದ ಸುವರ್ಣ ವರ್ಷದ ಹಿನ್ನೆಲೆಯಲ್ಲಿ ಈ ವರ್ಷದಿಂದ ಪ್ರಶಸ್ತಿಯ ಮೊತ್ತವನ್ನು 1,00,000/- ರೂಪಾಯಿಗೆ ವೃದ್ಧಿಸಲಾಗಿದೆ.
ಆರಂಭದಿಂದಲೂ ನಗದು ಪುರಸ್ಕಾರದ ಅರ್ಧಾಂಶವನ್ನು ಶ್ರೀಮಠ ಬರಿಸುತ್ತಾ ಬಂದಿದೆ. ಪ್ರಶಸ್ತಿ ಪ್ರದಾನ ನವೆಂಬರ್ 17, 2024 ಭಾನುವಾರ ಉಡುಪಿಯ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್ನಲ್ಲಿ ಜರಗಲಿದೆ.
ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿರುತ್ತಾರೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
