ಶ್ರೀ ವಿಶ್ವೇಶತೀರ್ಥ ಪ್ರಶಸ್ತಿಗೆ ಯಶಸ್ವೀ ಕಲಾವೃಂದ (ರಿ.) ಕೊಮೆ, ತೆಕ್ಕಟ್ಟೆ ಸಂಸ್ಥೆಯ ಆಯ್ಕೆ.
ಉಡುಪಿ : ಕಲಿಕೆಯೂ ಸೇರಿದಂತೆ ಯಕ್ಷಗಾನದ ಉಳಿವು, ಬೆಳವಣಿಗೆಗಾಗಿ ವಿಶಿಷ್ಟ ಕಾರ್ಯನಿರ್ವಹಿಸುತ್ತಾ, ರಜತ ಪರ್ವದ ಶುಭಾವಸರದಲ್ಲಿರುವ ಯಶಸ್ವೀ ಕಲಾವೃಂದ (ರಿ) ಕೊಮೆ, ತೆಕ್ಕಟ್ಟೆ ಸಂಸ್ಥೆಯು, ಯಕ್ಷಗಾನ ಕಲಾರಂಗ ಕೊಡಮಾಡುವ ಈ ಬಾರಿಯ ಪ್ರತಿಷ್ಠಿತ ‘ಶ್ರೀ ವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆಗೊಂಡಿದೆ.
ಯಕ್ಷಗಾನ ಕಲಾರಂಗದ ಸುವರ್ಣ ವರ್ಷದ ಹಿನ್ನೆಲೆಯಲ್ಲಿ ಈ ವರ್ಷದಿಂದ ಪ್ರಶಸ್ತಿಯ ಮೊತ್ತವನ್ನು 1,00,000/- ರೂಪಾಯಿಗೆ ವೃದ್ಧಿಸಲಾಗಿದೆ.
ಆರಂಭದಿಂದಲೂ ನಗದು ಪುರಸ್ಕಾರದ ಅರ್ಧಾಂಶವನ್ನು ಶ್ರೀಮಠ ಬರಿಸುತ್ತಾ ಬಂದಿದೆ. ಪ್ರಶಸ್ತಿ ಪ್ರದಾನ ನವೆಂಬರ್ 17, 2024 ಭಾನುವಾರ ಉಡುಪಿಯ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್ನಲ್ಲಿ ಜರಗಲಿದೆ.
ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿರುತ್ತಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

