‘ಬೈಕ್ ಬೇಕು, ಕೊಡಿಸಿ’ ಎಂದು ಮಗ ಅಂದದ್ದಕ್ಕೆ ತಂದೆ ನಿರಾಕರಿಸಿದ ಕಾರಣ ಮುನಿಸಿಕೊಂಡ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ದಾವಣಗೆರೆಯ ನ್ಯಾಮತಿ ಪಟ್ಟಣದಲ್ಲಿ ನಡೆದ ದಾರುಣ ಘಟನೆಯಲ್ಲಿ ತಂದೆ ಬೈಕ್ ಕೊಡಿಸಲಿಲ್ಲ ಎಂದು ಮಗ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಂದೆಗೆ ಹಣದ ಅಡಚಣೆಯಿತ್ತು. ಹಾಗಾಗಿ ಮಗ ಕೇಳಿದ ಬೈಕ್ ಕೊಡಿಸಲು ಸಾಧ್ಯವಾಗಲಿಲ್ಲ. ಆತ್ಮಹತ್ಯೆಗೆ ಮಾಡಿಕೊಂಡ ಯುವಕ ವಿಕಾಸ್.ಆರ್ (20) ಹಲವು ದಿನಗಳಿಂದ ಬೈಕ್ ಕೊಡಿಸುವಂತೆ ತನ್ನ ತಂದೆಯ ಬಳಿ ಕೇಳಿದ್ದರೂ ಅವನ ಆಸೆ ಪೂರೈಸಲು ತಂದೆಗೆ ಸಾಧ್ಯವಾಗಿರಲಿಲ್ಲ.
ಇದರಿಂದ ತಂದೆಯ ಮೇಲೆ ಕೋಪಗೊಂಡ ವಿಕಾಸ್ ಮನೆಯಲ್ಲಿ ಮಾತು, ಊಟ ಬಿಟ್ಟಿದ್ದ. ಕಳೆದ ಒಂದು ವಾರದಿಂದ ಮನೆ ಬಿಟ್ಟು ಸಂಬಂಧಿಕರ ಮನೆಯಲ್ಲಿ ವಾಸಿಸುತ್ತಿದ್ದ ಆತ ಅಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಸಂಬಂಧಿಕರು ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವಿಗೀಡಾಗಿದ್ದಾನೆ ಎಂದು ತಿಳಿದುಬಂದಿದೆ.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

